ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗಾಗಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ದೆಹಲಿಯ ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಶುಕ್ರವಾರ ಅಕ್ಟೋಬರ್ 7 ರಂದು ಇಡಿ ಮುಂದೆ ಹಾಜರಾಗುವಂತೆ ಕೇಳಲಾಗಿದೆ ಎಂದು ತಿಳಿದು ಬಂದಿದೆ. ಅವರ ಅಕ್ರಮ ಆಸ್ತಿಗೆ ಸಂಬಂಧಿಸಿದ ಮತ್ತೊಂದು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರನ್ನು ಕೊನೆಯದಾಗಿ ಸೆಪ್ಟೆಂಬರ್ 19 ರಂದು ದೆಹಲಿಗೆ ಕರೆಸಲಾಯಿತು.