ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಕೋಲಾರದಿಂದ ಸ್ಪರ್ಧಿಸದಂತೆ ಸೂಚನೆ ನೀಡಿದೆ. ಸಿದ್ದರಾಮಯ್ಯ ಈಗ ತಮ್ಮ ತವರು ಕ್ಷೇತ್ರವಾದ ವರುಣಾದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ದಲಿತರು ಮತ್ತು ಒಕ್ಕಲಿಗ ಮತದಾರರ ಸಿದ್ದು ಪರವಾಗಿಲ್ಲ ಎಂಬ ರಹಸ್ಯ ವರದಿಯನ್ನು ಪರಿಶೀಲಿಸಿದ ನಂತರ, ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದು ಅವರಿಗೆ ಸಲಹೆ ನೀಡಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪ ಅವರ ಸೋಲಿನಿಂದಾಗಿ ದಲಿತರು ಅವರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅದೇ ರೀತಿ ಜೆಡಿಎಸ್ ಅಭ್ಯರ್ಥಿ ಶ್ರೀನಾಥ್ ಕೂಡ ಪ್ರಸಿದ್ಧ ಉದ್ಯಮಿ ಮತ್ತು ಜನಪ್ರಿಯರಾಗಿದ್ದಾರೆ. ಹೀಗಾಗಿ ಕೋಲಾರದಲ್ಲಿ ಸ್ಪರ್ಧಿಸದಂತೆ ರಾಗಾ ಸಲಹೆ ನೀಡಿದ್ದರು ಎಂದು ಸಿದ್ದು ಆಪ್ತ ಮೂಲಗಳು ತಿಳಿಸಿವೆ.
ಸಿದ್ದು ಬದಲಿಗೆ ಒಕ್ಕಲಿಗ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸುವ ಸಾಧ್ಯತೆ ಇದೆ. ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗುವಂತೆ ಒಕ್ಕಲಿಗ ನಾಯಕರಿಗೆ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ.