ಆರಗ ಇತಿಹಾಸದಲ್ಲಿಯೇ ಅಸಮರ್ಥ ಗೃಹಸಚಿವ, ಸಿದ್ದರಾಮಯ್ಯ ಹೇಳಿಕೆ
ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕರ್ನಾಟಕ ಘಟಕ ಶನಿವಾರ ವಾಗ್ದಾಳಿ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅದಕ್ಷತೆಯೇ ಈ ಘಟನೆಗೆ ಕಾರಣವಾ ಎಂದಿದೆ. ಗೃಹ ಸಚಿವರ ಅದಕ್ಷತೆಯಿಂದ ರಾಜ್ಯ ಪೊಲೀಸ್ ಇಲಾಖೆ ಹಳಿ ತಪ್ಪಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
‘ಚುನಾವಣೆ ಹಂತದಲ್ಲಿ ಪೊಲೀಸರ ನಿಷ್ಕ್ರಿಯತೆ ಅಪಾಯಕಾರಿಯಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯವೈಖರಿ ಮೇಲೆ ನಿಗಾ ವಹಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇನೆ’ ಎಂದು ಮನವಿ ಮಾಡಿದರು. ಮಾರ್ಚ್ 25 ರಂದು ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.
ಸಂತ್ರಸ್ತೆ ನಗರದ ಕೋರಮಂಗಲ ಪ್ರದೇಶದವರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆ ಎಂಬ ನಂಬಿಕೆಯನ್ನು ಜನತೆ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು. ಸಮಾಜವಿರೋಧಿಗಳು ಮತ್ತು ಅಪರಾಧಿಗಳನ್ನುಸರ್ಕಾರ ಮಟ್ಟಹಾಕಬೇಕಿದೆ ಎಂದು ಅವರು ಹೇಳಿದರು. ರೌಡಿ ಶೀಟರ್ಗಳು, ಕೊಲೆಗಡುಕರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡಿ ಪಕ್ಷಕ್ಕೆ ಅನುಕೂಲ ಮಾಡಿಕೊಟ್ಟ ಪರಿಣಾಮ ಜನ ಇಂತಹ ಸ್ಥಿತಿ ಎದುರಿಸುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ.