News Karnataka Kannada
Monday, April 29 2024
ಬೆಂಗಳೂರು ಗ್ರಾಮಾಂತರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

Bengluru
Photo Credit :

ಬೆಂಗಳೂರು ಗ್ರಾಮಾಂತರ: 2022ರ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು  ನಡೆಯಲಿದ್ದು, ಪರೀಕ್ಷಾ ಕಾರ್ಯವು ಅತ್ಯಂತ ಶಾಂತಿಯುತವಾಗಿ, ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು  ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ, ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ೨೦೨೧-೨೨ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ಕೋವಿಡ್-19ರ ಕಾರಣ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿರಬೇಕು ಎಂದು ತಿಳಿಸಿದರು.

ಪ್ರತಿ ವಿಷಯಗಳ ಪರೀಕ್ಷೆಗಳಿಗೂ 2 ರಿಂದ 3 ದಿನಗಳ ಅಂತರವಿದ್ದು, ಪರೀಕ್ಷಾ ವೇಳಾಪಟ್ಟಿಯೂ ವಿದ್ಯಾರ್ಥಿ ಸ್ನೇಹಿಯಾಗಿದೆ  ಎಂದರಲ್ಲದೆ, ಪ್ರತಿದಿನ ಬೆಳಿಗ್ಗೆ 10.15 ಗಂಟೆಗೆ ಮೊದಲ ಬೆಲ್ ಆಗಲಿದ್ದು, ವಿದ್ಯಾರ್ಥಿಗಳು 10.45 ಗಂಟೆಯ ಒಳಗೆ ಪರಿಕ್ಷಾ ಕೇಂದ್ರಕ್ಕೆ ಬರಲು ಅವಕಾಶವಿದ್ದು, ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮರ, ಡಿಜಿಟಲ್ ಗಡಿಯಾರವನ್ನು ತರುವಂತಿಲ್ಲ ಎಂದು ಹೇಳಿದರು.

ಪ್ರತಿ ಕೊಠಡಿಗೆ 20 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಉತ್ತಮ  ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಸಿಸಿ ಕ್ಯಾಮರ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿಗಳು ಇತ್ಯಾದಿ ಮೂಲಭೂತ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ    2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 13,872 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಈ ಪೈಕಿ 534 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ೫೮ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ  ದೇವನಹಳ್ಳಿಯಲ್ಲಿ ೨ ಪರೀಕ್ಷಾ ಕೇಂದ್ರಗಳನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು  ಅವಕಾಶ ನೀಡುವಂತೆ ಮತ್ತು ರೆಗ್ಯುಲರ್ ಮಾರ್ಗ ಇಲ್ಲದ ಕಡೆಗಳಲ್ಲಿ ಮಕ್ಕಳಿಗಾಗಿಯೇ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು