ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚುಂಚೇಗೌಡನ ಹೊಸಹಳ್ಳಿ ಬಳಿ ತಂದೆ ಹಾಗೂ ಮಗ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು,ತಂದೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಂಬಲಗೆರೆ ನಿವಾಸಿ ವರುಣ್ (18) ಮೃತ ವಿದ್ಯಾರ್ಥಿ. ವರುಣ್ ತನ್ನ ತಂದೆಯ ಜತೆಯಲ್ಲಿ ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ. ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ.
ಬಸ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕ್ಯಾಂಟರ್ ಗೆ ಬೈಕ್ ಗುದ್ದಿದ್ದು, ಅಪಘಾತದ ರಭಸಕ್ಕೆ ವಿದ್ಯಾರ್ಥಿ ಹಾರಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆಯೇ ಕ್ಯಾಂಟರ್ ಹರಿದು ಹೋಗಿದೆ ಎಂದು ತಿಳಿದುಬಂದಿದೆ. ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಬಿನಿ ಜಲಾಶಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕ್ಯಾಂಟರ್ ಅಡ್ಡಗಟ್ಟಿ ಹತ್ತಿ ವ್ಯಾಪಾರಿಗಳಿಂದ ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಅವರ ಬಳಿ ಇದ್ದ ₹32 ಲಕ್ಷವನ್ನು ದೋಚಿಕೊಂಡು…
ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ…
ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…
ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.