News Karnataka Kannada
Tuesday, April 30 2024
ಬೆಂಗಳೂರು ಗ್ರಾಮಾಂತರ

ಮೇ 27 ರಿಂದ ಮಾವು, ಹಲಸು ಮೇಳ ಆರಂಭ

Untitled 1
Photo Credit :

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022 ಕಾರ್ಯಕ್ರಮವನ್ನು ಮೇ 27 ರಿಂದ 29ರವರೆಗೆ ದೇವನಹಳ್ಳಿ ತಾಲ್ಲೂಕಿನ (ನಂದಿ ಬೆಟ್ಟಕ್ಕೆ ಹೋಗುವ ರಸ್ತೆ, ರಾಣಿ ಕ್ರಾಸ್) ಹೋಟೆಲ್ ನಂದಿ ಉಪಚಾರ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗುವುದು  ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಯ ವಿಡಿಯೋ ಸಂವಾದದ ಕೊಠಡಿಯಲ್ಲಿಂದು ಮಾವು ಮತ್ತು ಹಲಸು ಪ್ರದರ್ಶನ ಹಾಗೂ ಮಾರಾಟ ಮೇಳ-2022ರ ಕುರಿತು ಮಾಹಿತಿ ನೀಡಿದರು.

ಮಾವು ಮತ್ತು ಹಲಸು ಒಂದು ಋತುಮಾನ ಆಧಾರಿತ ಬೆಳೆಯಾಗಿದ್ದು, ಪ್ರಸ್ತುತ ಹಂಗಾಮಿನಲ್ಲಿ ಮಾವು ಮತ್ತು ಹಲಸು ಬೆಳೆ ಕಟಾವಿಗೆ ಬಂದಿದ್ದು, ಮಾವು ಹಾಗೂ ಹಲಸು ಬೆಳೆಯುತ್ತಿರುವ ರೈತರಿಗೆ ಉತ್ತಮ ಬೆಲೆ ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಸಿಗುವಂತೆ ಮಾಡಲು ಈ ಮೇಳದಲ್ಲಿ ಸುಮಾರು ೫೦ಕ್ಕೂ ಹೆಚ್ಚು ವಿವಿಧ ಮಾವು ತಳಿಗಳ ಪ್ರದರ್ಶನ ಮತ್ತು ೧೦ಕ್ಕೂ ಹೆಚ್ಚು ವಿವಿಧ ಮಾವಿನ ತಳಿಗಳ ಮಾರಾಟದ ವ್ಯವಸ್ಥೆಯನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಕಲ್ಪಿಸಲಾಗಿದೆ ಎಂದರು.

ಜಿಲ್ಲೆಯ ಪ್ರಮುಖ ತೋಟಗಾರಿಕಾ ಬೆಳೆಗಳು ಹಾಗೂ ಜನರ ಬೇಡಿಕೆಗೆ ಅನುಗುಣವಾಗಿ ಮೇಳದಲ್ಲಿ ಮಾವು, ಹಲಸು, ಚಕೋತ, ದಾಳಿಂಬೆ, ದ್ರಾಕ್ಷಿ ಮಳಿಗೆ ಸೇರಿದಂತೆ 20 ರಿಂದ 25 ಮಳಿಗೆ ತೆರೆಯಲಾಗುವುದು ಎಂದರಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಕರ್ಯಗಳ ವ್ಯವಸ್ಥೆಗೂ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಮೇಳದಲ್ಲಿ ಸಸ್ಯ ಸಂತೆಯೆಂಬ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಜಿಲ್ಲೆಯ ಎಲ್ಲಾ ತೋಟಗಾರಿಕೆ ಕ್ಷೇತ್ರ ಮತ್ತು ನರ್ಸರಿಗಳಿಂದ ವಿವಿಧ ಜಾತಿಯ ಹಣ್ಣಿನ ಕಸಿ, ಸಸಿ ಗಿಡಗಳನ್ನು, ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ಹಾಗೂ ಇಲಾಖೆ ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರಲ್ಲದೆ, ಸಸ್ಯ ಸಂತೆಯಲ್ಲಿ ಮಾವು, ಸೀಬೆ, ತೆಂಗು, ನೇರಳೆ ಇತ್ಯಾದಿ ಹಾಗೂ ಅಲಂಕಾರಿಕ ಗಿಡಗಳನ್ನು ಮಾರಾಟ ಮಾಡಲಾಗುವುದು ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲೆಯಲ್ಲಿ ಮಾವು ಬೆಳೆಯನ್ನು 7586.94 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಪ್ರಮುಖವಾಗಿ ಬಾದಾಮಿ ರಸಪುರಿ, ತೋತಾಪುರಿ ಮಲ್ಲಿಕಾ, ಸೇಂದೂರು ಮುಂತಾದ ತಳಿಗಳನ್ನು ಬೆಳೆಯಲಾಗುತ್ತಿದೆ ಎಂದರಲ್ಲದೆ, ಹಲಸು ಬೆಳೆಯನ್ನು 69.52 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಮೇಳದಲ್ಲಿ ಹಾಪ್‌ಕಾಮ್ಸ್  ದರಕ್ಕಿಂತ ಕಡಿಮೆ ದರದಲ್ಲಿ ಗ್ರಾಹಕರು ಹಣ್ಣುಗಳನ್ನು ಕೊಳ್ಳಬಹುದಾಗಿದೆ ಎಂದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಗುಣವಂತ ಸೇರಿದಂತೆ ತಾಲ್ಲೂಕುಗಳಲ್ಲಿನ ಹಿರಿಯ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು