News Karnataka Kannada
Sunday, April 28 2024
ಬೆಂಗಳೂರು ಗ್ರಾಮಾಂತರ

ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವು: ತಬ್ಬಲಿಯಾದ ನವಜಾತ ಶಿಶು

Heart attack during liver transplant
Photo Credit :

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ದೊಡ್ಡಬಳ್ಳಾಪುರ ತಾಯಿ ಮಗು ಆಸ್ಪತ್ರೆಯಲ್ಲಿ ಹೆರಿಗೆಯಾದ ನಂತರ ತಾಯಿ/ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಸಾವನ್ನಪ್ಪಿದ್ದಾರೆಂದು ಮೃತಳ ಕುಟುಂಬಸ್ಥರು ಆರೋಪ ಮಾಡಿದ್ದು, ಇದೀಗ ತಾಯಿ ಇಲ್ಲದೇ ನವಜಾತ ಶಿಶು ಅನಾಥವಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಬೈರಾಪುರ ಗ್ರಾಮದ ಸವಿತಾ(23) ಅವರನ್ನು ಹೆರಿಗೆಗಾಗಿ ದೊಡ್ಡಬಳ್ಳಾಪುರ ತಾಯಿ ಮಗು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಧಿಕ ರಕ್ತಸ್ರಾವದಿಂದ ಹೆರಿಗೆಯಾದ ಕ್ಷಣದಲ್ಲೇ ಸವಿತಾ ಸಾವನ್ನಪ್ಪಿದ್ದಾರೆ. ತಾಯಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶಗೊಂಡ ಮೃತಳ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಮೃತ ಸವಿತಾ ಎರಡು ವರ್ಷಗಳ ಹಿಂದೆ ಬೈರಾಪುರದ ರಮೇಶ್ ಅವರನ್ನು ಮದುವೆಯಾಗಿದ್ದರು. ಚೊಚ್ಚಲ ಗರ್ಭಿಣಿಯಾಗಿದ್ದ ವೇಳೆ ಆಕೆಯ ರೆಗ್ಯೂಲರ್ ಚೆಕ್ ಆಪ್ ಅನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಿಸಲಾಗುತ್ತಿತ್ತು. ಗುರುವಾರದಂದು ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ದೊಡ್ಡಬಳ್ಳಾಪುರದ ತಾಯಿ ಮಗು ಆಸ್ಪತ್ರೆಗೆ ದಾಖಲು ಮಾಡಲಾಯಿತು. ತಾಯಿ ಹೊಟ್ಟೆಯಲ್ಲಿದ್ದ ಮಗು ಆಧಿಕ ತೂಕ ಇದ್ದ ಹಿನ್ನೆಲೆ ಸಹಜ ಹೆರಿಗೆ ಅಸಾಧ್ಯವಾಗಿತ್ತು.

ಆದರೆ, ವೈದ್ಯರು ಸಹಜ ಹೆರಿಗೆ ಆಗುತ್ತೆ ಎಂದು ಇಲ್ಲಿಯೇ ಉಳಿಸಿಕೊಂಡಿದ್ದಾರೆ. ಬೆಳಗ್ಗೆ 9ಗಂಟೆ ಸಮಯದಲ್ಲಿ ಹೆರಿಗೆಯಾದ ನಂತರ ಗರ್ಭಕೋಶದಲ್ಲಿ ತೀರ್ವ ರಕ್ತಸ್ರಾವ ಆಗಿ ಆರೋಗ್ಯದಲ್ಲಿ ಏರುಪೇರಾಗಿದೆ. ನಂತರ ವೈದ್ಯರು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಆದರೆ ಅವರು ಬೇರೆ ಆಸ್ಪತ್ರೆ ಹೋಗುವ ಮುನ್ನವೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.

ಮೃತಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ, ಹೊಟ್ಟೆಯಲ್ಲಿದ್ದ ಮಗು 4 ಕೆಜಿಗೂ ಹೆಚ್ಚು ತೂಕ ಇದ್ದು, ಹೆರಿಗೆ ಮಾಡಿಸೋದು ಸವಾಲಿನ ಕೆಲಸವಾಗಿತ್ತು, ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿದ್ದರೆ ನಾವು ಕರೆದುಕೊಂಡು ಹೋಗುತ್ತಿದ್ದೆವು. ಆದರೆ, ವೈದ್ಯರು ಇಲ್ಲಿಯೇ ಹೆರಿಗೆ ಮಾಡುವುದಾಗಿ ಧೈರ್ಯ ತುಂಬಿ ಕೊನೆಗೆ ಆಕೆಯ ಜೀವ ತೆಗೆದಿದ್ದಾರೆ.

ಹುಟ್ಟಿದ ಕ್ಷಣದಲ್ಲೇ ಮಗುವಿಗೆ ತಾಯಿ ಇಲ್ಲದಂತೆ ಮಾಡಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸವಿತಾಳ ಸಾವಿಗೆ ಕಾರಣರೆಂದು ಆರೋಪಿಸಿ ಅಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು