ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ ನಡೆಯಿತು.
ತಂಬಾಕು ಸೇವನೆಯಿಂದ ಆಗುವ ದುಷ್ಪಾರಿಣಾಮಗಳು ಮತ್ತು ಕೋಟ್ಪಾ ಕಾಯ್ದೆ -2003 ರ ಬಗ್ಗೆ ಅರಿವು ಮೂಡಿಸಲು ಹಾಗೂ ಶಾಲೆಗಳ ಸುತ್ತ 100 ಗಜ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇದಿಸಿ ಕೋಟ್ಪಾ ಕಾಯ್ದೆಯ 6ಬಿ ಸೆಕ್ಷನ್ ಅನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿರುವ ಎಲ್ಲಾ ಶಾಲೆಗಳಲ್ಲಿ ಏಕಕಾಲಕ್ಕೆ ಗುಲಾಬಿ ಆಂದೋಲನವನ್ನು ನಡೆಸಲಾಯಿತು.
ಕಾರ್ಯಕ್ರಮಧಿಕಾರಿ ಡಾ. ಮುರಳಿ ಮೋಹನ್, ಜಿಲ್ಲಾ ಸಲಹೆಗಾರ್ತಿ ಡಾ.ವಿದ್ಯಾರಾಣಿ.ಪಿ.ಎಸ್., ದೇವನಹಳ್ಳಿ ತಾಲ್ಲೂಕು ಆರೋಗ್ಯ ಅಧಿಕಾರಿ, ಡಾ.ಸಂಜಯ್.ಪಿ.ಕೆ., ಡಿ.ಡಿ.ಪಿ.ಐ ಕಛೇರಿ, ಶ್ರೀಕಂಠಯ್ಯ, ವಿಜಯಪುರ ಫ್ರೌಡಶಾಲೆ ಮುಖ್ಯೋಪಾಧ್ಯಾಯ ವೆಂಕಟೇಶ್, ರೇಖ, ಶಂಕರ್, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಲಹೆ ಸಹಕಾರ ನೀಡಿದರು.