ದೊಡ್ಡಬಳ್ಳಾಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹುಲಿಕುಂಟೆ ಬಳಿ ಸೋಮವಾರ ಸಂಜೆ ನಡೆದಿದೆ.
ನೆಲಮಂಗಲ ತಾಲೂಕಿನ ಮಾರನಕುಂಟೆ ಗ್ರಾಮದ ನಿವಾಸಿಗಳಾದ ಮಹೇಶ್ (27) ಮತ್ತು ಮಾರುತಿ (24) ಮೃತ ದುರ್ದೈವಿಗಳು.
ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ತಕ್ಷಣ, ಬಿಬಿಎಂಪಿ ಕಸದ ಟ್ರಕ್ ನ ಚಾಲಕ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು.