ಯಲಹಂಕ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ “ಹರ್ ಘರ್ ತಿರಂಗಾ”(ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ) ಅಭಿಯಾನದ ಪ್ರಯುಕ್ತ ಇಂದು ಯಲಹಂಕ ವಲಯ ಆರ್ ಎಮ್ ಝಡ್ ಗ್ಯಾಲೇರಿಯಾ ಮಾಲ್ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಡೊಲ್ಲು ಬಾರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ವಲಯ ವಿಶೇಷ ಆಯುಕ್ತರಾದ ರಂಗಪ್ಪ, ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ಖ್ಯಾತ ಗಾಯಕರಾದ ಜಯಶ್ರೀ, ಮುಖ್ಯ ಅಭಿಯಂತರರಾದ ರಂಗನಾಥ್, ಮಾಜಿ ಯೋಧರ ಸಂಘದ ಪದಾಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ನಾಗರಿಕರು, ವಿವಿಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು, ಪೌರಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.