News Karnataka Kannada
Saturday, April 27 2024
ಬೆಂಗಳೂರು ಗ್ರಾಮಾಂತರ

ನವಜಾತ ಶಿಶುವನ್ನು ಪೊದೆಯಲ್ಲಿ ಬಿಟ್ಟು ಹೋದ ತಾಯಿ: ಮಗುವಿನ ರಕ್ಷಣೆ

Mother leaves newborn baby in bush, rescues baby
Photo Credit : News Kannada

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ನವಜಾತ ಹೆಣ್ಣು ಶಿಶುವನ್ನು ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಾಡುಬ್ಯಾಡರ ಹಳ್ಳಿಯಲ್ಲಿ ನಡೆದಿದೆ.ಬಳಿಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಶಿಶುವನ್ನು ರಕ್ಷಣೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರವಾನಿಸಿದ್ದಾರೆ.

ತಾಲೂಕಿನ ಕಾಡುಬ್ಯಾಡರಹಳ್ಳಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಮನೆಗಳ ಸಂದಿ ಮಧ್ಯದಲ್ಲಿ ಬೆಳೆದಿದ್ದ ಹೂವಿನ ಗಿಡದ ಪೊದೆಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಈ ಶಿಶುವನ್ನು ಇರುವೆಗಳು ಮುತ್ತಿಕೊಂಡಿತ್ತು. ಬಳಿಕ ಇರುವೆಗಳಿಂದ ರಕ್ಷಣೆ ಮಾಡಿದ ಸ್ಥಳೀಯರು ಮನೆಗೆ ತಂದು ಆರೈಕೆ ಮಾಡಿದ್ದಾರೆ. ನಂತರ ಜಿಲ್ಲಾ ಮಕ್ಕಳ ರಕ್ಷಣ ಘಟಕಕ್ಕೆ ಮಾಹಿತಿ ನೀಡಿದ್ದಾರೆ.

ಶಿಶುವನ್ನು ಯಾರು ಎಸೆದು ಹೋಗಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಹೆಣ್ಣು ಮಗು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಶಂಕೆ ಇದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಗುವನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ದಾಖಲು ಮಾಡಿದ್ದು, ಸದ್ಯ ಮಗು ಆರೋಗ್ಯವಾಗಿದೆ ಎಂದು ತಿಳಿದುಬಂದಿದೆ.

ತಿಪ್ಪೆಗುಂಡಿಯಲ್ಲಿ ನವಜಾತ ಶಿಶು ಪತ್ತೆ: ಕಳೆದ ಆಗಸ್ಟ್​ ತಿಂಗಳಲ್ಲಿಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದ ರಸ್ತೆ ಬದಿಯ ತಿಪ್ಪೆಗುಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿತ್ತು. ಶಿಶುವನ್ನು ಗೋಣಿ ಚೀಲದ ಮೇಲೆ ಮಲಗಿಸಿ ತಿಪ್ಪೆಗುಂಡಿಯಲ್ಲಿ ಬಿಟ್ಟು ಹೋಗಿದ್ದರು. ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದರು. ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮತ್ತು ತಾಲೂಕು ಆಸ್ಪತ್ರೆಯ ಸಿಬ್ಬಂದಿಗೆ ಮಾಹಿತಿ‌ ನೀಡಿದ್ದರು.ಬಳಿಕ ಸ್ಥಳಕ್ಕೆ ಧಾವಿಸಿದ್ದ ಸಿಬ್ಬಂದಿ ಶಿಶುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು