ಹೊಸಕೋಟೆ: ದಿನ ಕಳೆದಂತೆ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಮೊನ್ನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್ನನ್ನು ಪೊಲೀಸರು ಬಂಧಿಸಿದ್ದಾರೆ.
ಡಾ.ಶ್ರೀನಿವಾಸ್ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು ಕ್ರಮವಾಗಿ ನರ್ಸ್ ಅನಿತಾ, ನರ್ಸ್ ನೇತ್ರಾ, ರೇವತಿ ಮತ್ತು ರಾಧಿಕಾ ಆರೋಪಿಗಳಾಗಿದ್ದಾರೆ.
ಎಸ್ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರುವ ವೈದ್ಯರ ತೀವ್ರ ವಿಚಾರಣೆ ನಂತರ 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ.
ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.