ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಬಿ.ವೈ. ವಿಜಯೇಂದ್ರ ಅವರೊಂದಿಗೆ ನಡೆದುಕೊಂಡ ರೀತಿ, ಆಪ್ತತೆ ಬಗ್ಗೆ ವಿಡಿಯೋ, ಫೋಟೋಗಳು ಸಾಕಷ್ಟು ಹರಿದಾಡುತ್ತಿವೆ.
ಈ ಕುರಿತು ಸಿಟಿ ರವಿ ನೀಡಿದ್ದ ಕಿಚನ್ ಕ್ಯಾಬಿನೇಟ್ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿಯ ಕಾಲೆಳೆದಿದೆ. ನಮ್ಮ ಪಕ್ಷದ ಟಿಕೆಟ್ ಕಿಚನ್ನಲ್ಲಿ ತೀರ್ಮಾನ ಆಗಲ್ಲ ಅಂದಿದ್ರಲ್ಲ ಮಾನ್ಯ @CTRavi_BJP ಅವರೇ ಇದೇನಿದು ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಆಗ್ತಾ ಇದೆಯಲ್ಲ. ವಿಜಯೇಂದ್ರ ಅವರಿಗೆ ಟಿಕೆಟ್ ಫಿಕ್ಸ್ ಆಯ್ತಾ? ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು? ಎಲೆಕ್ಷನ್ ಮುಗಿವವರೆಗೆ ‘ಸಂತೋಷ’ ಆಟ ನಡೆಯುವುದಿಲ್ಲ ಅಲ್ಲವೇ? ಎಂದು ಪ್ರಶ್ನೆ ಮಾಡಿದೆ.
ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಸಂಬಂಧಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ ರವಿ, ಟಿಕೇಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನ ನಡೆಯುವುದಿಲ್ಲ. ಸಂಸದೀಯ ಮಂಡಳಿಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಪಕ್ಷದಲ್ಲಿ ಕಿಚನ್ನಲ್ಲಿ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದರು. ಅಲ್ಲದೆ ಮುಂದುವರೆದು ನಾಯಕರ ಮಕ್ಕಳೆಂದ ಕಾರಣಕ್ಕೆ ಅವರಿಗೆ ಟಿಕೇಟ್ ಸಿಕ್ಕಲ್ಲ ಈಗ ವಿಜಯೇಂದ್ರ ಬಗ್ಗೆ ಕೇಳಿದ್ದೀರಿ ಅವರಿಗೆ ಟಿಕೇಟ್ ನೀಡುವ ನಿರ್ಧಾರವನ್ನು ಸಂಸದೀಯ ಮಂಡಳಿ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದರು.
ನಮ್ಮ ಪಕ್ಷದ ಟಿಕೆಟ್ ಕಿಚನ್ನಲ್ಲಿ ತೀರ್ಮಾನ ಆಗಲ್ಲ ಅಂದಿದ್ರಲ್ಲ ಮಾನ್ಯ @CTRavi_BJP ಅವರೇ
ಇದೇನಿದು ನಿಮ್ಮ ಹೇಳಿಕೆಗೆ ವಿರುದ್ಧವಾಗಿ ಆಗ್ತಾ ಇದೆಯಲ್ಲ. ವಿಜಯೇಂದ್ರ ಅವರಿಗೆ ಟಿಕೆಟ್ ಫಿಕ್ಸ್ ಆಯ್ತಾ? ಯಡಿಯೂರಪ್ಪ ಮತ್ತು ಸಂತೋಷ್ ನಡುವಣ ಮೇಲಾಟದಲ್ಲಿ ಯಾರ ಕೈ ಮೇಲಾಯ್ತು?
ಎಲೆಕ್ಷನ್ ಮುಗಿವವರೆಗೆ ‘ಸಂತೋಷ’ ಆಟ ನಡೆಯುವುದಿಲ್ಲ ಅಲ್ಲವೇ? pic.twitter.com/IWohHOufbK
— Karnataka Congress (@INCKarnataka) March 24, 2023