ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬುಧವಾರ ತಡರಾತ್ರಿ ಕಾಂಗ್ರೆಸ್ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ 5 ಕ್ಷೇತ್ರಗಳಿಗೆ ಕಾಂಗ್ರೆಸ್ ಬುಧವಾರ ಮಧ್ಯರಾತ್ರಿ 2ಕ್ಕೆ ಕಾಂಗ್ರೆಸ್ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬಾಕಿ ಉಳಿದುಕೊಂಡಿದ್ದ ರಾಯಚೂರು ನಗರ, ಶಿಡ್ಲಘಟ್ಟ, ಸಿ.ವಿ ರಾಮನ್ ನಗರ, ಅರಕಲಗೂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.
ಕಾಂಗ್ರೆಸ್ ಅಭ್ಯರ್ಥಿಗಳ ವಿವರ ಹೀಗಿದೆ:
ರಾಯಚೂರು – ಮೊಹಮ್ಮದ್ ಶಾಲಮ್
ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ
ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್
ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ
ಮಂಗಳೂರು ಉತ್ತರ – ಇನಾಯತ್ ಅಲಿ