ಬೆಂಗಳೂರು: ಇನ್ಫೊಸಿಸ್ ಪ್ರತಿಷ್ಠಾನದ ವತಿಯಿಂದ ಸಂಚಾರಿ ಕಣ್ಣಿನ ಆಸ್ಪತ್ರೆ ಆರಂಭ

ಬೆಂಗಳೂರು: ಇನ್ಫೊಸಿಸ್‌ ಲಿಮಿಟೆಡ್‌ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ(ಸಿಎಸ್‌ಆರ್‌) ಹಾಗೂ ಸಾಮಾಜಿಕ ಅಭಿವೃದ್ಧಿ ಚಟುವಟಿಕೆಗಳನ್ನು ನಿಭಾಯಿಸುವ ಇನ್ಫೊಸಿಸ್‌ ಪ್ರತಿಷ್ಠಾನವು ಶ್ರೀ ಶಾರದಾದೇವಿ ಸಂಚಾರಿ ಕಣ್ಣಿನ ಆಸ್ಪತ್ರೆ ಆರಂಭಿಸಲು ಶ್ರೀ ರಾಮಕೃಷ್ಣ ಸೇವಾಶ್ರಮದ ಜೊತೆಗೂಡುತ್ತಿರುವುದಾಗಿ ತಿಳಿಸಿದೆ.

ರಾಜ್ಯದ ಹಳ್ಳಿಗಾಡಿನ ಜನರಿಗೆ ಸೇವೆ ಒದಗಿಸಲು ಅತ್ಯಂತ ವಿಭಿನ್ನವಾದ, ಸಂಪೂರ್ಣ ಸುಸಜ್ಜಿತವಾದ ಸಂಚಾರಿ ಕಣ್ಣಿನ ಆಸ್ಪತ್ರೆ ಇದಾಗಿರಲಿದೆ. ಇನ್ಫೊಸಿಸ್ ಪ್ರತಿಷ್ಠಾನ ಹಾಗೂ ಶ್ರೀ ರಾಮಕೃಷ್ಣ ಸೇವಾಶ್ರಮ ಹೀಗೆ ಒಗ್ಗೂಡುತ್ತಿರುವುದರ ಹಿಂದೆ ತುಮಕೂರು, ಅನಂತಪುರ, ಚಿತ್ರದುರ್ಗ ಮತ್ತು ರಾಯಚೂರು ಜಿಲ್ಲೆಗಳ ದೂರದ ಊರುಗಳಲ್ಲಿನ ಮಕ್ಕಳು, ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಐದು ಲಕ್ಷಕ್ಕೂ ಹೆಚ್ಚಿನ ಜನರಿಗೆ ಗುಣಮಟ್ಟದ, ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳನ್ನು ಒದಗಿಸುವ ಉದ್ದೇಶ ಇದೆ.

ಕ್ಯಾಟರಾಕ್ಟ್, ಕಣ್ಣಿನಲ್ಲಿ ಗಡ್ಡೆ, ಕಣ್ಣೀರು ಸೋರುವಿಕೆ, ಗ್ಲಾಕೊಮಾ, ಮಧುಮೇಹದಿಂದಾಗಿ ದೃಷ್ಟಿಗೆ ಹಾನಿ, ಮೆಳ್ಳೆಗಣ್ಣು, ಕಣ್ಣಿನ ಕ್ಯಾನ್ಸರ್ ಹಾಗೂ ಕಿವಿ, ಮೂಗು ಮತ್ತು ಗಂಟಲಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಇತರ ಸಾಮಾನ್ಯ ಕಾಯಿಲೆಗಳ ತಪಾಸಣೆಯ ಸೌಲಭ್ಯವನ್ನು ಈ ಸಂಚಾರಿ ಆಸ್ಪತ್ರೆ ನೀಡಲಿದೆ. ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕೂಡ ಈ ಹಿಂದೆ ಇನ್ಫೊಸಿಸ್ ಪ್ರತಿಷ್ಠಾನವು ನೆರವು ಒದಗಿಸಿತ್ತು. 2021ರಲ್ಲಿ ಈ ಆಸ್ಪತ್ರೆಗೆ ಹೊಸ ವಿಭಾಗವನ್ನು ನಿರ್ಮಿಸಲು ಸಹಾಯ ನೀಡಿತ್ತು. ಇದುವರೆಗೆ ಆಸ್ಪತ್ರೆಯು ಸಹಸ್ರಾರು ಜನರಿಗೆ ಶಸ್ತ್ರಚಿಕಿತ್ಸೆಯ ಸೌಲಭ್ಯ ಒದಗಿಸಿದೆ.

‘ಬಹುಕಾಲದಿಂದ ಮೂಲಭೂತ ಆರೋಗ್ಯ ಸೇವೆಗಳೂ ಸಿಗದೆ ಇದ್ದವರಿಗೆ ಗುಣಮಟ್ಟದ ಕಣ್ಣಿನ ಆರೋಗ್ಯ ಸೇವೆ ಒದಗಿಸಲು ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಜೊತೆ ಕೈಜೋಡಿಸುತ್ತಿರುವುದು ನಮಗೆ ಸಂತಸದ ವಿಚಾರ. ಸಂಚಾರಿ ಕಣ್ಣಿನ ಆಸ್ಪತ್ರೆಯಂತಹ ತಾಂತ್ರಿಕವಾಗಿ ಮುಂದಿರುವ ಸೌಲಭ್ಯಗಳನ್ನು ಹಿಂದುಳಿದಿರುವ ವರ್ಗಗಳ ಜನರ ಮನೆಬಾಗಿಲಿಗೆ ತಲುಪಿಸುವ ಮೂಲಕ ನಾವು ಸಮುದಾಯದ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯದಲ್ಲಿ ಸಾಧ್ಯವಾದಷ್ಟು ಪರಿಣಾಮಕಾರಿ ನೆರವು ಒದಗಿಸುವ ಉದ್ದೇಶವನ್ನು ಹೊಂದಿದ್ದೇವೆ’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಟ್ರಸ್ಟಿ ಸುನೀಲ್ ಕುಮಾರ್ ಧಾರೇಶ್ವರ ಹೇಳಿದ್ದಾರೆ.

‘ದೇಶದಲ್ಲಿ ಸರಿಸುಮಾರು ಪ್ರತಿ ಒಂದು ಲಕ್ಷ ಜನರಿಗೆ ಒಬ್ಬರು ನೇತ್ರತಜ್ಞರು ಲಭ್ಯವಿದ್ದಾರೆ. ನಮ್ಮಲ್ಲಿ ಕಣ್ಣಿನ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳನ್ನು ಉತ್ತಮಪಡಿಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಜನರಿಗೆ, ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ತೀರಾ ಮೂಲಭೂತವಾದ ಕಣ್ಣಿನ ಆರೋಗ್ಯ ಸೇವೆಗಳು ಕೂಡ ಸಿಗುತ್ತಿಲ್ಲ. ಪಾವಗಡವು (ತುಮಕೂರು ಜಿಲ್ಲೆ) ಗ್ರಾಮೀಣ ಪ್ರದೇಶಗಳನ್ನು ಹೆಚ್ಚು ಹೊಂದಿದೆ, ಆರೋಗ್ಯ ಸೇವೆಗಳು ಇಲ್ಲಿ ಹೆಚ್ಚು ಲಭ್ಯವಿಲ್ಲ.

ಕರ್ನಾಟಕದ ಮೊದಲ ಅತ್ಯಾಧುನಿಕ ಸಂಚಾರಿ ಕಣ್ಣಿನ ಆಸ್ಪತ್ರೆಯು ‍ಪಾವಗಡದ ಸಹಸ್ರಾರು ಮಂದಿಗೆ ನೆರವಾಗಲಿದೆ. ಈ ಆಸ್ಪತ್ರೆಗೆ ನೆರವು ಒದಗಿಸಿದ್ದಕ್ಕೆ ನಾವು ಇನ್ಫೊಸಿಸ್ ಪ್ರತಿಷ್ಠಾನಕ್ಕೆ ಧನ್ಯವಾದ ಅರ್ಪಿಸುತ್ತಿದ್ದೇವೆ. ಇನ್ಫೊಸಿಸ್ ಪ್ರತಿಷ್ಠಾನದ ಈ ಉದಾರ ಹಾಗೂ ಅಮೂಲ್ಯ ನೆರವಿನ ಕಾರಣದಿಂದಾಗಿ ನಮಗೆ, ರಾಜ್ಯದ ಇತರ ದುರ್ಗಮ ಪ್ರದೇಶಗಳಲ್ಲಿ ಸೇವೆಗಳ ಅಗತ್ಯ ಇರುವವರನ್ನು ತಲುಪಲು ಸಾಧ್ಯವಾಗಲಿದೆ ಎಂದು ಭಾವಿಸುತ್ತೇವೆ‘ ಎಂದು ಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಸ್ವಾಮಿ ಜಪಾನಂದ ಅವರು ಹೇಳಿದ್ದಾರೆ.

Ashika S

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

14 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

39 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

48 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago