News Karnataka Kannada
Sunday, April 28 2024
ಬೆಂಗಳೂರು

ಬೆಂಗಳೂರು: ಧಾರವಾಡದಲ್ಲಿ ಮೋದಿ ಕಾರ್ಯಕ್ರಮಕ್ಕೆ 9 ಕೋಟಿ ಖರ್ಚು ಮಾಡಿದ ರಾಜ್ಯ ಸರ್ಕಾರ

Number of Jan Dhan accounts crosses 50 crore mark: PM
Photo Credit : Facebook

ಬೆಂಗಳೂರು: ಚುನಾವಣೆ ಹೊಸ್ತಿನಲ್ಲಿರು ರಾಜ್ಯಕ್ಕೆ  ಪ್ರಧಾನಿ ಮೋದಿ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೋಟಿ, ಕೋಟಿ ರೂ.ಗಳನ್ನು ಭದ್ರತೆ, ವಿವಿಧ ವ್ಯವಸ್ಥೆಗಳಿಗೆ ಖರ್ಚು ಮಾಡುತ್ತಿದೆ.

ಧಾರವಾಡದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ 9 ಕೋಟಿ ರೂ. ಖರ್ಚು ಮಾಡಿರುವ ದಾಖಲೆಗಳನ್ನು  ಜೆಡಿಎಸ್ ನಾಯಕರು ಬಿಡುಗಡೆ ಮಾಡಿದ್ದಾರೆ. ಐಐಟಿ ಕ್ಯಾಂಪಸ್ ಉದ್ಘಾಟಿಸಲು ಮಾರ್ಚ್‌ನಲ್ಲಿ ಮೋದಿ ಧಾರವಾಡಕ್ಕೆ ಭೇಟಿ ನೀಡಿದ್ದರು.

ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ ಅವರು ಆರ್ ಟಿಐ  ಮೂಲಕ ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ 9.49 ಕೋಟಿ ರೂ.ಗಳನ್ನು ಖರ್ಚು ಮಾಡಿರುವುದನ್ನು ಜಿಲ್ಲಾಡಳಿತ ಬಹಿರಂಗಪಡಿಸಿದೆ.

ಮೋದಿ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಕರೆದೊಯ್ಯಲು ವಾಹನ ವ್ಯವಸ್ಥೆಗೆ  2.83 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಹುಣಸಿ ಮರದ ತಿಳಿಸಿದ್ದಾರೆ. ಇನ್ನೂ ೧೦ ಕೋಟಿ ರೂ.ಗಳನ್ನು ಕಾನೂನು ಬಾಹಿರವಾಗಿ ಖರ್ಚು ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಹಣದಲ್ಲಿ ಸರ್ಕಾರ 300 ಮನೆಗಳನ್ನು ನಿರ್ಮಿಸಬಹುದಿತ್ತು ಎಂದು ವಿವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು