ಬೆಂಗಳೂರು: ತಮ್ಮ ರಾಜ್ಯದಲ್ಲಿ ನಂದಿನಿ ಹಾಲಿನ ಡೈರಿಗಳನ್ನು ವಿಸ್ತರಣೆ ಮಾಡದಂತೆ, ಕೆಎಂಎಫ್ ನೊಂದಿಗೆ ಕೇರಳ ಸರಕಾರದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಕೇರಳದ ಪಶುಸಂಗೋಪನೆ, ಡೈರಿ ಅಭಿವೃದ್ಧಿ ಮತ್ತು ಹಾಲು ಸಹಕಾರಿಗಳ ಸಚಿವ ಜೆ ಚಿಂಚುರಾಣಿ ಅವರು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಸಿಇಒ ಅವರಿಂದ ಕೇರಳದ ಹಾಲಿನ ಡೈರಿಗಳಲ್ಲಿ ನಂದಿನಿ ಬ್ರಾಂಡ್ನ ಹಾಲುಗಳನ್ನು ಮಾರಾಟದ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಸದ್ಯಕ್ಕೆ ನಂದಿನಿ ಹೊಸ ಮಳಿಗೆಗಳನ್ನು ತೆರೆಯುವುದಿಲ್ಲ ಎಂಬ ಮಾಹಿತಿಯನ್ನು ಕೆಎಂಎಫ್ನ ಸಿಇಒ ಹೇಳಿದ್ದಾರೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಕೆಎಂಎಫ್ ನಿರ್ಧಾರವನ್ನು ಸಚಿವರಾದ ಚಿಂಚುರಾಣಿ ಸ್ವಾಗತಿಸಿದ್ದು, ಕರ್ನಾಟಕದಲ್ಲಿ ಸರ್ಕಾರ ಬದಲಾವಣೆಯಾದ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಿದ್ದಾರೆ.