News Karnataka Kannada
Friday, May 03 2024
ಬೆಂಗಳೂರು

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್‌ಗೆ ಸೇರ್ಪಡೆ

Lakshman Savadi joins Congress
Photo Credit : Facebook

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ​ಕಾಂಗ್ರೆಸ್​ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಲಕ್ಷ್ಮಣ ಸವದಿಯವರನ್ನು ಕಾಂಗ್ರೆಸ್ ನಾಯಕರೆಲ್ಲರೂ ಸ್ವಾಗತಿಸುತ್ತೇವೆ. ಲಕ್ಷ್ಮಣ ಸವದಿ ಜೊತೆ ನಾವು ಎಲ್ಲವನ್ನೂ ಚರ್ಚೆ ಮಾಡಿದ್ದೇವೆ. ಸಂಜೆ 4 ಗಂಟೆಗೆ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಹೇಳಿದರು.

ಬಿಜೆಪಿ ಕೊಟ್ಟ ಮಾತಿನಂತೆ ನಡೆಯದಿದ್ದಾಗ ಪಕ್ಷ ತ್ಯಜಿಸುತ್ತಿದ್ದೇನೆ. ವಿಧಾನಪರಿಷತ್​ನ ಬಿಜೆಪಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದ ಟಿಕೆಟ್​ ನೀಡುವಂತೆ ಕೇಳಿದ್ದೇನೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಅಥಣಿ ಕ್ಷೇತ್ರಕ್ಕೆ ಯೋಜನೆ ರೂಪಿಸುತ್ತೇನೆ. ಅಥಣಿ ಕ್ಷೇತ್ರದ ನೀರಾವರಿ ಯೋಜನೆ ಪೂರ್ಣಗೊಳಿಸಲು ಮನವಿ ಮಾಡಿದ್ದೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ನನ್ನ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರ ಅನುಮತಿ ಪಡೆದಿದ್ದೇನೆ. ಇಂದು ಸಂಜೆ 4 ಗಂಟೆಗೆ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವೆ. ಇಂದು ಸಂಜೆ 4.30ಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ನಾನು ಬೆಳಗಾವಿ ಜಿಲ್ಲೆಗೆ ಸೀಮಿತವಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಇಡೀ ರಾಜ್ಯ ಸುತ್ತಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶಕ್ತಿಮೀರಿ ಪ್ರಯತ್ನ ಮಾಡುವೆ. ರಾಜ್ಯದ ಇತರೆ ಭಾಗಗಳಲ್ಲಿ ನನ್ನನ್ನು ಬಳಸಿಕೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಮ್ಮತಿ ಸೂಚಿಸಿದ್ದೇನೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು