ಬೆಂಗಳೂರು

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಬಂಧಿತ ವ್ಯಕ್ತಿಯನ್ನು ಶೆಹರಿ ಚೌಧರಿ ಎಂದು ಗುರುತಿಸಲಾಗಿದ್ದು, ಅಸ್ಸಾಂನಿಂದ ಬೆಂಗಳೂರಿಗೆ 6ಇ 716 ಇಂಡಿಗೊ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಕೃತ್ಯ ಎಸಗಿದ್ದಾನೆ ಎಂದು ವಿಮಾನ ನಿಲ್ದಾಣ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಪ್ರಯಾಣಿಕನು ವಿಮಾನವು ಗಾಳಿಯಲ್ಲಿದ್ದಾಗ ಶೌಚಾಲಯದಲ್ಲಿ ಧೂಮಪಾನ ಮಾಡಿ ಇತರ ಪ್ರಯಾಣಿಕರ ಸುರಕ್ಷತೆಗೆ ಅಪಾಯವನ್ನುಂಟು ಮಾಡಿದ್ದನು. ವಿಮಾನದ ಸಿಬ್ಬಂದಿ ಶೌಚಾಲಯದಲ್ಲಿ ವಾಸನೆಯನ್ನು ಗಮನಿಸಿ ಅಧಿಕಾರಿಗಳಿಗೆ ವರದಿ ಮಾಡಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ ಆತನನ್ನು ವಶಕ್ಕೆ ಪಡೆಯಲಾಗಿದೆ. ಶುಕ್ರವಾರ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ವಿಮಾನ ನಿಲ್ದಾಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಾರ್ಚ್ ಮೊದಲ ವಾರದಲ್ಲಿ 24 ವರ್ಷದ ಮಹಿಳೆಯೊಬ್ಬರು ಕೋಲ್ಕತ್ತಾದಿಂದ ಇಂಡಿಗೊ ವಿಮಾನದಲ್ಲಿ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದರು. ಬೆಂಗಳೂರಿಗೆ ಆಗಮಿಸಿದಾಗ ಅವರನ್ನು ಬಂಧಿಸಲಾಯಿತು ಮತ್ತು ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

Ashika S

Recent Posts

ಪುತ್ತೂರು: ಹೋರಿಗಾಗಿ ದೈವದ ಮೊರೆ ಹೋದ ಬಜರಂಗದಳ

ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…

10 mins ago

ರೈತರಿಗೆ ಬೀಜ, ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

12 mins ago

ಕಾಂಗ್ರೆಸ್‌ಗೆ 1 ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲಾಗಲಿಲ್ಲ: ಸಂಜೀವ ಮಠಂದೂರು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…

13 mins ago

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

30 mins ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

37 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

44 mins ago