ಬೆಂಗಳೂರು: ಬೆಂಗಳೂರಿನಲ್ಲಿ ಉದ್ದೇಶಪೂರ್ವಕವಾಗಿ ನಾಯಿಯ ಮೇಲೆ ಕಾರನ್ನು ಚಲಾಯಿಸಿ ಅದನ್ನು ಕೊಂದ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬನಿಗಾಗಿ ಕರ್ನಾಟಕ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಈ ಘಟನೆ ಜನವರಿ 7 ರಂದು ನಡೆದಿದ್ದು, ಈ ಭಯಾನಕ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಇತ್ತೀಚೆಗೆ ಬೆಳಕಿಗೆ ಬಂದಿದೆ.
ಈ ವೀಡಿಯೊದಲ್ಲಿ ಬೀದಿ ನಾಯಿಯು ರಸ್ತೆಯ ಮಧ್ಯದಲ್ಲಿ ಮಲಗಿದ್ದು, ಕಾರು ತನ್ನ ಕಡೆಗೆ ಬರುತ್ತಿದೆ ಎಂದು ತಿಳಿದ ನಂತರ ದೂರ ಸರಿಯಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಕಾರು ಚಾಲಕ, ನಾಯಿ ದೂರ ಸರಿಯುತ್ತಿರುವುದನ್ನು ಗಮನಿಸಿದ ನಂತರ, ವೇಗವನ್ನು ಹೆಚ್ಚಿಸುತ್ತಾನೆ ಮತ್ತು ಅದನ್ನು ಉದ್ದೇಶಪೂರ್ವಕವಾಗಿ ಚಕ್ರಗಳ ಕೆಳಗೆ ತಂದು ಕೊಂಡಿದ್ದಾನೆ.
ಚಕ್ರದ ಕೆಳಗೆ ಇದ್ದ ನಾಯಿ ಸ್ಥಳದಲ್ಲೇ ಮೃತಪಟ್ಟಿದೆ. ನಾಯಿಗೆ ಸಹಾಯ ಮಾಡಲು ಸ್ಥಳೀಯರು ಮಾಡಿದ ಪ್ರಯತ್ನಗಳು ವ್ಯರ್ಥವಾಗಿವೆ. ಕಾರು ಚಾಲಕ ಹಾರ್ನ್ ನೀಡಿದ್ದರೆ ಅಥವಾ ಸ್ವಲ್ಪ ನಿಧಾನ ಮಾಡಿದ್ದರೆ, ನಾಯಿ ದೂರ ಸರಿಯುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೊಲೀಸರು ಕಾರು ನೋಂದಣಿ ಸಂಖ್ಯೆಯನ್ನು (ಕೆಎ 05 ಎಂಪಿ 5836) ಗುರುತಿಸಿದ್ದಾರೆ ಮತ್ತು ಚಾಲಕನಿಗಾಗಿ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…
ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…