ಬೆಂಗಳೂರು: ಶಿವಮೊಗ್ಗದ ಲಿಂಗಾಯತ ಸಮುದಾಯದ ಪ್ರಬಲ ನಾಯಕ, ಬಿಜೆಪಿ ಎಂಎಲ್ಸಿ ಆಯನೂರು ಮಂಜುನಾಥ್ ಪಕ್ಷವನ್ನು ತೊರೆದಿದ್ದಾರೆ. ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ನಾನು ಇಂದು ಪರಿಷತ್ ಸಭಾಪತಿಯನ್ನು ಭೇಟಿಯಾಗಿ ರಾಜೀನಾಮೆಯನ್ನು ಸಲ್ಲಿಸುತ್ತೇನೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಗುರುವಾರ ನಾಮಪತ್ರ ಸಲ್ಲಿಸುತ್ತೇನೆ” ಎಂದು ಬುಧವಾರ ಬೆಳಿಗ್ಗೆ ಮಾಧ್ಯಮಗಳಿಗೆ ತಿಳಿಸಿದರು.