News Karnataka Kannada
Thursday, May 16 2024
ಬೆಂಗಳೂರು

ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಭರ್ಜರಿ ಪ್ರತಿಕ್ರಿಯೆ, ಒಂದು ಕೋಟಿಗೂ ಹೆಚ್ಚು ಜನರಿಂದ ನೋಂದಣಿ

More than one crore people have registered for the GrihaJyothi scheme.
Photo Credit : News Kannada

ಬೆಂಗಳೂರು: ಗೃಹ ಜ್ಯೋತಿ ಯೋಜನೆಯ ನೋಂದಣಿಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದ್ದು, ಜೂನ್​ 18ರಂದು ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ.

ಮೊದಲ ದಿನ 96 ಸಾವಿರಕ್ಕೂ ಹೆಚ್ಚು ಮಂದಿ ಗ್ರಾಹಕರು ಅರ್ಜಿ ಸಲ್ಲಿಸಿದ್ದರೆ, ಎರಡನೇ ದಿನ ಈ ಸಂಖ್ಯೆ ದುಪ್ಪಟ್ಟಾಗಿತ್ತು. ಯೋಜನೆಗೆ ಚಾಲನೆ ಸಿಕ್ಕಿದ ಎರಡು ವಾರಗಳ ನಂತರ ಬುಧವಾರ (ಜು.5) ಗೃಹ ಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡವರ ಸಂಖ್ಯೆ ಒಂದು ಕೋಟಿ ದಾಟಿದೆ.

ಗೃಹ ಜ್ಯೋತಿ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಗಡುವು ಇರುವುದಿಲ್ಲ ಮತ್ತು ಅರ್ಹ ಫಲಾನುಭವಿಗಳು ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದು ಎಂದು ಇಂಧನ ಇಲಾಖೆ ತಿಳಿಸಿದೆ.

ಆದರೆ, ಜುಲೈ 25ರ ಮೊದಲು ಅರ್ಜಿ ಸಲ್ಲಿಸಿದವರಿಗೆ ಮಾತ್ರ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಸಿಗಲಿದೆ. ಆರಂಭಿಕ ದೋಷಗಳ ಹೊರತಾಗಿಯೂ, ನೋಂದಣಿ ಪ್ರಕ್ರಿಕೆಯೆಗೆ ಭರ್ಜರಿ ಪ್ರತಿಕ್ರಿಯೆ ಲಭ್ಯವಾಗಿದೆ. ಈ ಯೋಜನೆಯಲ್ಲಿ ರಾಜ್ಯದ ಪ್ರತಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ದೊರಕಲಿದೆ. ಯೋಜನೆಗೆ ಅರ್ಜಿ ಸಲ್ಲಿಸುವವರು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕಚೇರಿಗಳಲ್ಲಿ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಮಾಡಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು