ಬೆಂಗಳೂರು: ಬೆಂಗಳೂರು- ಮೈಸೂರು ರೈಲು ಶನಿವಾರದಿಂದ ಉತ್ತರ ಕನ್ನಡದ ಮುರ್ಡೇಶ್ವರದ ವರೆಗೆ ಪ್ರಯಾಣ ಬೆಳೆಸಲಿದೆ. ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು ಮಂಗಳೂರಿಗೆ ಸಂಜೆ 6.35ಕ್ಕೆ ಬಂದು ಬೆಳಗ್ಗೆ 6ಕ್ಕೆ ಬೆಂಗಳೂರು ತಲುಪುತ್ತದೆ.
ಬೆಂಗಳೂರಿನಿಂದ ರಾತ್ರಿ 9ಕ್ಕೆ ಹೊರಟು ಮೈಸೂರು ಮೂಲಕ ಬೆಳಗ್ಗೆ 9.05ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ವಾರದಲ್ಲಿ ಆರು ದಿನಗಳ ಕಾಲ ಈ ಸೇವೆ ಇರಲಿದೆ.
ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಮಂಗಳೂರಿಗೆ ಸಂಚರಿಸುತ್ತಿದ್ದ ರೈಲನ್ನು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ವಿಸ್ತರಿಸಿ ಭಾರತೀಯ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಬೆಂಗಳೂರು-ಮುರ್ಡೇಶ್ವರವನ್ನು ವಾರಕ್ಕೆ ಆರು ದಿನಗಳ ಬದಲಿಗೆ ದೈನಂದಿನ ಎಕ್ಸ್ಪ್ರೆಸ್ಗೆ ಅನುಮೋದಿಸಿದೆ.