ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನಿಂದ ಸಾಯುತ್ತಿರುವವವರ ಸಂಖ್ಯೆ ಹೆಚ್ಚಿದೆ. ಈ ಸಂದರ್ಭ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವರ ಸಂಖ್ಯೆ ಕಡಿಮೆ ಮಾಡುವಂತೆ ರಾಜ್ಯ ಸರಕಾರ ಆದೇಶ ನೀಡಿದೆ ಎಂದು ಬೆಂಗಳೂರು ಗ್ರಾಮಾಂತರದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಹೇಳಿದ್ದಾರೆ.
ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರದ ಸಂದರ್ಭದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಈ ಹಿಂದೆ ಅವಕಾಶ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಪ್ರಕಟಿಸಿರುವ ಹೊಸ ಮಾರ್ಗಸೂಚಿಯಲ್ಲಿ ಅಂತ್ಯಸಂಸ್ಕಾರದ ವೇಳೆ ಭಾಗವಹಿಸುವವರ ಸಂಖ್ಯೆಯನ್ನು ಐದು ಜನರಿಗೆ ಇಳಿಸಲು ಆದೇಶಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.