News Karnataka Kannada
Friday, May 10 2024
ಬೆಂಗಳೂರು ನಗರ

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ಹಿನ್ನೆಲೆ, ಸಂರಕ್ಷಣಾ ಮಹಾ ಒಕ್ಕೂಟದಿಂದ ಫೆ.19ರಂದು ಪ್ರತಿಭಟನೆ

Local News
Photo Credit : News Kannada

ಬೆಂಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮವನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ವತಿಯಿಂದ ಫೆಬ್ರವರಿ 19ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್ಎಸ್ ಅಧ್ಯಕ್ಷ ಎನ್ ಮೂರ್ತಿ ತಿಳಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಮಾನ್ಯ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲರು ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಧ್ವಜಸ್ತಂಭದ ಕಡೆಯಿಂದ ತೆಗೆಸುವ ಮೂಲಕ ಮಹಾನ್ ವ್ಯಕ್ತಿಗೆ ಅವಮಾನ ಮಾಡುತ್ತಾರೆ.

ಇದು ಈ ರಾಜ್ಯದ ಎಲ್ಲಾ ಜವಾಬ್ದಾರಿಯುತ ನಾಗರಿಕರನ್ನು ತೀವ್ರವಾಗಿ ನೋವುಂಟು ಮಾಡಲಾಗಿರುತ್ತದೆ .ಹಾಗಾಗಿ ಸಾವಿರಾರು ಸಂಘಟನೆಗಳ ಮುಖಾಂತರ ರಾಜ್ಯದ ಎಲ್ಲಾ ಕಡೆ ಬೃಹತ್ ಪ್ರತಿಭಟನೆಗಳು ನಡೆದಿರುತ್ತವೆ. ಅಲ್ಲದೆ ಕರ್ನಾಟಕದ ಉಚ್ಚ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಸದಸ್ಯರು ಸಹ ಈ ಪ್ರಕರಣಕ್ಕೆ ಯಾವುದೇ ತಾರ್ಕಿಕ ಅಂತ್ಯವನ್ನು ನೀಡದೆ ಕೇವಲ ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ, ಸ್ವತಂತ್ರ ದಿನಾಚರಣೆ ಹಾಗೂ ಸಂವಿಧಾನ ದಿನದಂದು ಮಾತ್ರ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಬೇಕೆಂದು ತೀರ್ಮಾನವನ್ನು ತೆಗೆದುಕೊಂಡಿದೆ ಇದನ್ನು ತೀವ್ರವಾಗಿ ಎಲ್ಲಾ ಸಂಘಟನೆಗಳು ಖಂಡಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ ಗೋಪಾಲ್ ಸಂವಿಧಾನ ಅಡಿಯಲ್ಲಿ ರಚಿತಗೊಂಡಿರುವ ಸರ್ಕಾರವು ಸಹ ತಮ್ಮ ವಿವೇಚನೆಯನ್ನು ಬಳಸಿ ಮಾನ್ಯ ಉಚ್ಚ ನ್ಯಾಯಾಲಯದಿಂದ ನ್ಯಾಯಮೂರ್ತಿಗಳಿಗೆ ವಿವರಗಳನ್ನು ಪಡೆದು ಮಾನ್ಯ ನ್ಯಾಯಾಧೀಶರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಲು ಗೌರವಾನ್ವಿತ ರಾಜ್ಯಪಾಲರು ಕ್ರಮವಹಿಸಬೇಕೆಂದು ಸರ್ಕಾರ ಶಿಫಾರಸು ಮಾಡದೆ ಮೌನವಹಿಸಿದೆ,

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಮಾಡಿದ ಅಪಮಾನ ಆದಕಾರಣ ಸರ್ಕಾರದ ಧೋರಣೆಯನ್ನು ಖಂಡಿಸಿ ದೇಶದ ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನವನ್ನು ಗೌರವಿಸುವ ಎಲ್ಲಾ ಸಂಘಟನೆಗಳು ಸೇರಿ ಸಂವಿಧಾನದ ಸಂರಕ್ಷಣಾ ಮಹಾಒಕ್ಕೂಟ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಅದರ ಆಶ್ರಯದಲ್ಲಿ ಫೆಬ್ರವರಿ 19ರಂದು 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸೇರಿ ಬೆಂಗಳೂರು ಕೆಎಸ್ಆರ್ ರೈಲ್ವೆ ನಿಲ್ದಾಣದಿಂದ ವಿಧಾನಸೌಧದ ಮುಂದಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವೆಂಕಟಸ್ವಾಮಿ, ಮಾವಳ್ಳಿ ವೆಂಕಟೇಶ್, ಎಂ ಮಹಾದೇವಸ್ವಾಮಿ, ಶ್ರೀಧರ್ ಮುಂತಾದ ದಲಿತ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು