News Karnataka Kannada
Friday, May 03 2024
ಬೆಂಗಳೂರು ನಗರ

ಅಟಲ್ ಜಿ ಜನ್ಮದಿನ : ರುದ್ರ ಭೂಮಿಯಲ್ಲಿ ಸ್ವಚ್ಚತಾ ಕಾರ್ಯ ನಡೆಸಿದ ಪ್ರಲ್ಹಾದ್ ಜೋಶಿ

Pralahad Joshi
Photo Credit :

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನವನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಿಸುವ ಸಲುವಾಗಿ ಬಿಜೆಪಿ ಸರ್ಕಾರದ ಮತ್ತು ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಲ್ಲಿಯ ಹಳೆ ಹುಬ್ಬಳ್ಳಿ ಹೆಗ್ಗೇರಿ ರುದ್ರ ಭೂಮಿ ಸ್ವಚ್ಚತಾ ಕಾರ್ಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮುನ್ನುಡಿ ಬರೆದರು.

ಈ ಸ್ವಚ್ಚತಾ ಮತ್ತು ಅಭಿವೃದ್ಧಿ ಅಭಿವೃದ್ಧಿ ಅಭಿಯಾನದಲ್ಲಿ ಸ್ವತಃ ಪ್ರಲ್ಹಾದ ಜೋಶಿಯವರು ತೊಡಿಕೊಂಡು ಸಾಕ್ಷಿಯಾದರು. ಪಕ್ಷದ ಕಾರ್ಯಕರ್ತರು ಮತ್ತು ಮಹಾನಗರ ಪಾಲಿಕೆ ಪೌರಕಾರ್ಮಿಕರು ಇಡೀ ರುದ್ರಭೂಮಿ ಸ್ವಚ್ಚಗೊಳಿಸಿ ಗಿಡ ನೆಟ್ಟರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮೋದಿಯವರ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನವನ್ನು ವಿಶೇಷವಾಗಿ ಆಚರಿಸಲು ಸೂಚಿಸಿದ್ದರು ಅದರಂತೆ ಈ ರುದ್ರಭೂಮಿ ಸ್ವಚ್ಚತೆಯಿಲ್ಲದ ಕಾರಣ ತನ್ನ ಅಸ್ತಿತ್ವ ಕಳೆದುಕೊಂಡಿತ್ತು. ಎಲ್ಲ ಪಕ್ಷದ ಕಾರ್ಯಕರ್ತರು ಮತ್ತು ಪಾಲಿಕೆ ಸಿಬ್ಬಂದಿಯಿಂದ ರುದ್ರಾಭೂಮಿ ಸ್ವಚ್ಚತೆ ಮತ್ತು ಅಭಿವೃದ್ಧಿ ಪಡಿಸಲಾಗುತ್ತಿದೆ. ಸ್ವಚ್ಚತಾ ಕಾರ್ಯ ಒಂದು ದಿನಕ್ಕೆ ಮುಗಿಯುವುದಿಲ್ಲ. ಸಂಪೂರ್ಣ ಶುಚಿಗೊಳಿಸಿ ಕೆಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿ ಪಾಲಿಕೆಯವರಿಗೆ ನೀಡಲಾಗುತ್ತದೆ ಮುಂದೆ ಅವರು ಇದರ ಸಂಪೂರ್ಣ ಜವಾಬ್ದಾರಿ ಹೊತ್ತು ನೋಡಿಕೊಂಡು ಹೋಗುತ್ತಾರೆ ಎಂದರು.

ಅವಳಿನಗರದ ಸ್ಮಾರ್ಟ್ ಸಿಟಿ ಯೋಜನೆಗಳು ಸ್ವಲ್ಪ ವಿಳಂಬವಾಗಿದ್ದವು, ಆದರೆ ಈಗ ತೀವ್ರ ಗತಿಯಲ್ಲಿ ನಡೆಯುತ್ತವೆ. ಹಿಂದೆ ಎಲ್ಲ ಅಧಿಕಾರಿಗಳೊಂದಿಗೆ ಸಭೆ ಮಾಡಿ ಬೇಗ ಮುಗಿಸಲು ತಿಳಿಸಲಾಗಿತ್ತು. ಸದ್ಯದಲ್ಲೇ ಇನ್ನೊಂದು ಸಭೆ ಕರೆದು ಕಾಮಗಾರಿ ಬೇಗ ಮುಗಿಸಲು ಸೂಚಿಸಲಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು