ಬೆಂಗಳೂರು: ಸರ್ಕಾರದಲ್ಲಿನ ಆಡಳಿತಾತ್ಮಕ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಕೆಲವು ಇಲಾಖೆಗಳು ಹಾಗೂ ನಿಗಮ ಮಂಡಳಿಗಳು ಹೊಸ ಕಾರುಗಳಿಗೆ ಪ್ರಸ್ತಾವ ಮಾಡಿದೆ. ಇವುಗಳನ್ನು ಪುನರ್ ಪರಿಶೀಲಿಸಬೇಕು ಎಂದು ಆದೇಶಿಸಿದ್ದಾರೆ.
ಸಚಿವರಿಗಾಗಿ 20 ಹೊಸ ಕಾರುಗಳ ಖರೀದಿಗೆ ಒಪ್ಪಿಗೆ ನೀಡಿದ ಬಳಿಕ ಈ ಕ್ರಮ ಕೈಗೊಂಡಿದ್ದಾರೆ.
ಈ ಬಗ್ಗೆ ಒಂದೆರಡು ದಿನಗಳಲ್ಲಿ ಆದೇಶ ಹೊರಡಿಸುವಂತೆಯೂ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಅನಗತ್ಯ ಸರ್ಕಾರಿ ವೆಚ್ಚಗಳಿಗೆ ಕಡಿವಾಣ ಹಾಕಿರುವುದು ಮುಖ್ಯಮಂತ್ರಿಗಳ ದಿಟ್ಟ ಕ್ರಮ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಹೇಳಿಬರುತ್ತಿದೆ.