ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿನಿಯೊಬ್ಬರು ತಂದೆ ಹೃದಯಾಘಾತದಿಂದ ಮೃತಪಟ್ಟ ನೋವಿನಲ್ಲಿಯೂ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.
ಬಸವನಗುಡಿ ನ್ಯಾಷನಲ್ ಹೈಸ್ಕೂಲಿನಲ್ಲಿ ಗಣಿತ ಪರೀಕ್ಷೆ ಬರೆದಿದ್ದಾರೆ.
10ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಎಂಬುವವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ತಂದೆಯ ಅಗಲಿಕೆ ನೋವಿನಲ್ಲಿರುವ ವೈಷ್ಣವಿ ಅನಿವಾರ್ಯವಾಗಿ ಪರೀಕ್ಷೆಗೆ ಹಾಜರಾಗಿದ್ದಾರೆ.
ತಡರಾತ್ರಿ ವೈಷ್ಣವಿ ತಂದೆ ಮೃತಪಟ್ಟಿದ್ದಾರೆ. ತಂದೆಯ ಅಗಲಿಕೆ ನೋವಲ್ಲಿ ಕಣ್ಣೀರಿಡುತ್ತಲೇ ಪರೀಕ್ಷೆಗೆ ಆಗಮಿಸಿರುವ ವಿದ್ಯಾರ್ಥಿನಿ ಪರೀಕ್ಷೆ ಬಳಿಕ ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ.