News Karnataka Kannada
Sunday, April 28 2024
ಬೆಂಗಳೂರು ನಗರ

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ  ಆರೋಪ: ಇಬ್ಬರು ಮಹಿಳೆಯರು ಸೇರಿ 6 ಮಂದಿ ಬಂಧನ

Photo Credit :

ಬೆಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ  ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿ 6 ಮಂದಿಯನ್ನು ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಅಗರ ನಿವಾಸಿ ಕಲಾವತಿ (52), ಬಂಡೇಪಾಳ್ಯ ನಿವಾಸಿ ರಾಜೇಶ್ವರಿ (50) ಮತ್ತು ಸಂತ್ರಸ್ತೆ ಮೇಲೆ ಐದಾರು ದಿನಗಳ ಕಾಲ ಅತ್ಯಾಚಾರ ಎಸಗಿದ ಹೊಸೂರಿನ ಆಟೋ ಮೊಬೈಲ್‌ ಕಂಪನಿಯ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಕೇಶವಮೂರ್ತಿ (47), ಕೋರಮಂಗಲದ ಸತ್ಯರಾಜು (43), ಯಲಹಂಕದ ಶರತ್‌ (38) ಹಾಗೂ ಬೇಗೂರಿನ ರಫೀಕ್ (38) ಬಂಧಿತರು

ಆರೋಪಿಗಳು ನಗರದ 16 ವರ್ಷದ ಸಂತ್ರಸ್ತೆ ಮೇಲೆ ಐದಾರು ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಅಪಹರಣ, ಮಾನವ ಕಳ್ಳ ಸಾಗಾಣಿಕೆ, ಅತ್ಯಾಚಾರ, ವೇಶ್ಯಾವಾಟಿಕೆ, ಜೀವ ಬೆದರಿಕೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಬೇರೆ ಜಿಲ್ಲೆಯಿಂದ ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಬಂದಿರುವ ಸಂತ್ರಸ್ತೆ ಕುಟುಂಬ ನಗರದಲ್ಲಿ ವಾಸವಾಗಿದ್ದು, ಆಕೆಯ ಪೋಷಕರು ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ಮಧ್ಯೆ ಸಂತ್ರಸ್ತೆ ಕೂಡ ಶಾಲೆಗೆ ಹೋಗುತ್ತಾ, ರಾಜೇಶ್ವರಿ ಬಳಿ ಹೊಲಿಗೆ ಯಂತ್ರದ ತರ ಬೇತಿ ಪಡೆಯಲು ಹೋಗುತ್ತಿದ್ದಳು. ಈ ವೇಳೆ ರಾಜೇಶ್ವರಿ, ಸಂತ್ರಸ್ತೆಗೆ ಮನೆಗೆ ಕರೆದೊಯ್ದು ಜ್ಯೂಸ್‌ನಲ್ಲಿ ಪ್ರಜ್ಞೆ ತಪ್ಪಿಸುವ ಔಷಧ ಬೆರೆಸಿದ್ದಾಳೆ. ನಂತರ ಕೇಶವಮೂರ್ತಿ ಅತ್ಯಾಚಾರ ಎಸಗಿದ್ದಾನೆ.

ಎಚ್ಚರಗೊಂಡ ಬಳಿಕ ಸಂತ್ರಸ್ತೆಗೆ ತಲೆ ಸುತ್ತು ಬಂದು ಬಿದ್ದಿದ್ದೆ ಎಂದು ಹೇಳಿ, ಸ್ನಾನ ಮಾಡಿಸಿ ಕಳುಹಿಸಿದ್ದಳು. ಎರಡು ದಿನಗಳ ಬಳಿಕ ಮತ್ತೆ ಸಂತ್ರಸ್ತೆಗೆ ರಾಜೇಶ್ವರಿ ಕರೆ ಮಾಡಿ ಬರುವಂತೆ ಸೂಚಿಸಿದ್ದಾರೆ. ಆದರೆ, ಸಂತ್ರಸ್ತೆ ಒಪ್ಪದ್ದಿದ್ದಾಗ, ಈ ವಿಚಾರವನ್ನು ಪೋಷಕರಿಗೆ ಹೇಳುವುದಾಗಿ ಬೆದರಿಸಿ, ಐದಾರು ದಿನಗಳ ಕಾಲ ಮನೆಗೆ ಕರೆಸಿಕೊಂಡಿದ್ದು ಆಗಲೂ ಸತ್ಯರಾಜು, ಶರತ್‌ ಮತ್ತು ರಫೀಕ್‌ ಅತ್ಯಾಚಾರ ಎಸಗಿಸಿದ್ದಾರೆ. ಅವರಿಂದ ರಾಜೇಶ್ವರಿ ಹಣ ಸಹ ಪಡೆದುಕೊಂಡಿದ್ದಳು ಎಂದು ಹೇಳಲಾಗಿದೆ. ಇದಾದ ನಂತರವೂ ಕರೆ ಮಾಡಿ, ಮತ್ತೂಬ್ಬ ಗ್ರಾಹಕ ಬಂದಿರುವುದಾಗಿ ಹೇಳಿದಾಗ ಸಂತ್ರಸ್ತೆ ನಿರಾಕರಿಸಿ ದ್ದರು. ಅಲ್ಲದೆ, ಈ ವಿಚಾರವನ್ನು ಪೋಷಕರಿಗೆ ಹೇಳಿದ್ದಾಳೆ.

ಕೂಡಲೇ ಪೋಷಕರು ಪೊಲೀಸ್‌ ಠಾಣಗೆ ದೂರು ನೀಡಿದ್ದಾರೆ. 36 ಗಂಟೆಯಲ್ಲೇ ಆರೋಪಿಗಳ ಬಂಧನ: ಕಳೆದ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ, ಮಡಿವಾಳ ಎಸಿಪಿ ಸುಧೀರ್‌ ಎಂ. ಹೆಗಡೆ ಮತ್ತು ಎಚ್‌ಎಸ್‌ಆರ್‌ ಲೇಔಟ್‌ ಠಾಣಾಧಿಕಾರಿ ಮುನಿರೆಡ್ಡಿ ಆರೋಪಿಗಳ ಬಂಧನಕ್ಕೆ ತಡರಾತ್ರಿಯೇ 4 ವಿಶೇಷ ತಂಡ ರಚಿಸಿ ದ್ದರು. ಕ್ಷೀಪ್ರ ಕಾರ್ಯಾಚರಣೆ ನಡೆಸಿದ ತಂಡಗಳು ಹೊಸೂರು ಸೇರಿ ವಿವಿಧೆಡೆ ಇದ್ದ ಆರೋಪಿಗಳನ್ನು ಕೇವಲ 36 ಗಂಟೆಯಲ್ಲೇ ಬಂಧಿಸಿದೆ. ವಿಶೇಷ ತಂಡದ ಈ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು