ಅರ್ಚಕರಿಗೆ 6 ನೇ ವೇತನ ಶ್ರೇಣಿ ಜಾರಿ, ರಾಜ್ಯ ಸರ್ಕಾರದ ತೀರ್ಮಾನ

ಬೆಂಗಳೂರು: ಅರ್ಚಕರು ಮತ್ತು ಸಿಬ್ಬಂದಿಗೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭರ್ಜರಿ ದಸರಾ ಗಿಫ್ಟ್ ನೀಡಿದ್ದಾರೆ. ಅರ್ಚಕರು, ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ದಸರಾ ಹಬ್ಬದ ನಿಮಿತ್ತ ಮೂರು ನಾಲ್ಕು ಯೋಜನೆ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಅಕ್ಟೋಬರ್ 1ರಿಂದ 6ನೇ ವೇತನ ಶ್ರೇಣಿ ಜಾರಿಗೆ ಬರುವಂತೆ ನಿರ್ಧಾರ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಒಳಿತಿಗಾಗಿ ವಿಜಯ ದಶಮಿ ದಿನ ಅಂದರೆ ಅಕ್ಟೋಬರ್ 15ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಮಕ್ಕಳ ಆರೋಗ್ಯ ರಕ್ಷಣೆಗಾಗಿ ವಿಶೇಷ ಪೂಜೆ ಸಲ್ಲಿಸಬೇಕು. ರಾಜ್ಯದ A ಗ್ರೇಡ್‌ನ 205 ದೇಗುಲಗಳಲ್ಲಿ ಇಂಟಿಗ್ರೇಟೆಡ್ ಟೆಂಪಲ್ ಮ್ಯಾನೇಜ್‌ಮೆಂಟ್ ಸಿಸ್ಟಂ ಜಾರಿ ಮಾಡಲಾಗುತ್ತೆ.

ದೇಗುಲಕ್ಕೆ ಸಂಬಂಧಿಸಿದ ಪೂರ್ಣ ಮಾಹಿತಿ, ಸೇವಾ ವಿವರ, ದೇವಸ್ಥಾನಗಳ ಚರಾಸ್ತಿ, ಸ್ಥಿರಾಸ್ತಿಯ ಮಾಹಿತಿ ತಂತ್ರಾಂಶದಲ್ಲಿ ಲಭ್ಯವಾಗಲಿದೆ. ಪಾರದರ್ಶಕತೆ ಕಾಪಾಡಲು ಹೊಸ ಸಾಫ್ಟ್‌ವೇರ್ ಅಳವಡಿಕೆ ಮಾಡಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರು, ನೌಕರರಿಗೆ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಜಾರಿಗೊಳಿಸಲಾಗುತ್ತೆ. ವಾರ್ಷಿಕವಾಗಿ 1.22 ಕೋಟಿ ರೂ. ವೆಚ್ಚದಲ್ಲಿ ಅರ್ಚಕರಿಗೆ ವಿಮೆ ಸೌಲಭ್ಯ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮೆ ಜಾರಿಗೆ ಚಿಂತನೆ ನಡೆಯುತ್ತಿದೆ. ಕೋವಿಡ್ನಿಂದ ಹಲವು ತೊಂದರೆಗಳನ್ನು ಅನುಭವಿಸಿದ್ದೀವಿ. ವಿಜಯದ ಸಂಕೇತವಾಗಿ ಆಚರಣೆ ಮಾಡುವ ದಿನ ವಿಜಯ ದಶಮಿ ಹೀಗಾಗಿ ಈ ದಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಇನ್ನು ಈ ವೇಳೆ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಹಾಜರ್ ಇದ್ದರು.

Raksha Deshpande

Recent Posts

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

10 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

35 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

53 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

1 hour ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

1 hour ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

2 hours ago