ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆ ಮುಂದೆ ಸೆಲ್ಫಿ ತೆಗೆಯಲು ಹೋದಾ 28ವರ್ಷದ ಯುವಕ ಅಭಿಲಾಷ್ ವಿ ಅನ್ನು ಆನೆ ತುಳಿದು ಹಾಕಿದ ಪರಿಣಾಮ ಮೃತಪಟಿದ್ದಾರೆ. ಬನ್ನೇರುಘಟ್ಟ ಸಫಾರಿಯ ಸೀಗೆಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ಕಂಡೆಕ್ಟರ್ ಅವರ ಪುತ್ರ ಮೃತ ಅಭಿಲಾಷ್ ವಿ. ಉದ್ಯಾನವನದಲ್ಲಿ ಅಭಿಲಾಷ್ ಸೆಲ್ಫಿ ತೆಗೆದುಕೊಳ್ಳುತ್ತಿರುವಾಗ ಸುಂದರ್ ಎಂಬ ಆನೆ ಉದ್ರೇಕಗೊಂಡಿದೆ. ಅಭಿಲಾಷ್ ಜತೆ ಇತರ ಮೂವರು ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳುತ್ತಿದ್ಗರು, ಅದೃಷ್ಟಾವತ್ ಅವರು ಅಪಾಯದಿಂದ ಪಾರಾಗಿದ್ದಾರೆ.
ಹಿಂದಿನಿಂದಲೂ ಅಭಿಲಾಷ್ ಗೆ ಆನೆಗಳ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಅಭ್ಯಾಸವಿತ್ತು. ಈ ಹಿಂದೆ ಮದಗಜಗಳಾದ ರೌಡಿ ರಂಗ ಮತ್ತು ಐರಾವತನನ್ನು ಪಳಗಿಸಲು ಕ್ರಾಲ್ ನಲ್ಲಿ ಇಟ್ಟಿದ್ದಾಗಲೂ ಬಂದು ಸೆಲ್ಫಿ ತೆಗೆದುಕೊಂಡು ಹೋಗಿದ್ದರಂತೆ. ಆದರೆ ಈ ಬಾರಿ ರಜೆಯ ದಿನ ಭದ್ರತಾ ಸಿಬ್ಬಂದಿ ಕಣ್ತಪ್ಪಿಸಿ ಬಂದು ಸಫಾರಿಯಲ್ಲಿದ್ದ ಸುಂದರ ಎಂಬ ಆನೆ ಬಳಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಆನೆ ದಾಳಿ ಮಾಡಿದೆ. ಈ ವೇಳೆ ತಪ್ಪಿಸಿಕೊಳ್ಳಲಾಗದೇ ಅಭಿಲಾಷ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ವಿಷಯ ತಿಳಿದ ಪಾರ್ಕ್ ನ ಅಧಿಕಾರಿಗಳು ಸೀಗೆಕಟ್ಟೆ ಪೊಲೀಸರಿಗೆ ವಿಷಯ ತಿಳಿಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದರು. ನಂತರ ಬಂದ ಅಭಿಲಾಷ್ ನ ಸಂಬಂಧಿಕರು ಹಕ್ಕಿಪಿಕ್ಕಿ ಕಾಲೋನಿ ಬಳಿಯಿದ್ದ ಅಭಿಲಾಷ್ ನ ದ್ವಿಚಕ್ರ ವಾಹನ ಗುರುತಿಸಿದರು. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿ