ದುಡಿಯುವ ಕೈಗಳಿಗೆ ಕೆಲಸವಿಲ್ಲ. ಅನ್ನಕ್ಕಾಗಿ ಹಾಹಾಕಾರವಿದೆ. ಸೇವೆ ಎಂದು ಸೋಗಲಾಡಿತನ ತೋರಿಸುವ ಆರ್ ಎಸ್ ಎಸ್ ಬೆಲೆ ಏರಿಕೆ ಬಗ್ಗೆ ಮಾತನಾಡಬೇಕು. ಬಡವರ ಭಾರತ, ಶ್ರೀಮಂತರ ಭಾರತದ ಬಗ್ಗೆ ಹೇಳಬೇಕು. ಅದಕ್ಕೆ ಕಾರಣವಾದ 7 ವರ್ಷಗಳ ಆಡಳಿತದ ಬಗ್ಗೆ ದನಿಯೆತ್ತಬೇಕು. ಇಲ್ಲವಾದರೆ ಬಡವರ ಭಾರತದ ಆಕ್ರೋಶಕ್ಕೆ ನೀವು ತುತ್ತಾಗುವುದು ತಪ್ಪುವುದಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಕೆಲಸವೇ ಬೇರೆ, ಅನಗತ್ಯವಾಗಿ ಸಂಘವನ್ನು ಎಳೆದು ತರೋದು ಸರಿಯಲ್ಲ. ಅದನ್ನು ಕೇಳಲು ನಾವಿದ್ದೀವಿ, ನೀವಿದ್ದೀರಲ್ಲ ಎಂದರು. ಇದೇ ಸಂದರ್ಭದಲ್ಲಿ ಐಟಿ ದಾಳಿ ಬಗ್ಗೆ ಮಾತನಾಡಿ, ನಾನೂ ಮಾಧ್ಯಮದಲ್ಲಿ ನೋಡಿದ್ದೇನೆ. ಕಾನೂನು ಕ್ರಮ ಏನು ಆಗುತ್ತದೋ ಆದು ಆಗುತ್ತದೆ.