ಬೆಂಗಳೂರು: ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಭರವಸೆ ನೀಡಿದ್ದಾರೆ.
ಎರಡು ದಿನಗಳ ಹಿಂದೆ ಸುಂಕದಕಟ್ಟೆ ಬಳಿ ಕೆಲಸಕ್ಕೆ ಹೊರಟಿದ್ದ ಯುವತಿ ಬಸ್ ನಿಲ್ದಾಣ ಬಳಿ ಬಸ್ಸಿಗಾಗಿ ಕಾಯುತ್ತಿದ್ದಾಗ ಬಂದ ಆರೋಪಿ ಯುವಕ ನಾಗೇಶ್ ಯುವತಿ ಮೇಲೆ ಏಕಾಏಕಿ ಆಸಿಡ್ ಎರಚಿ ಪರಾರಿಯಾಗಿದ್ದು ಆತನಿಗಾಗಿ ಬೆಂಗಳೂರು ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಈ ಮಧ್ಯೆ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯ ಆರೋಗ್ಯ ವಿಚಾರಿಸಲು ಇಂದು ಆರೋಗ್ಯ ಸಚಿವ ಡಾ ಸುಧಾಕರ್ ಭೇಟಿ ನೀಡಿದ್ದರು. ನಂತರ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸಂತ್ರಸ್ತೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ವೈಯಕ್ತಿಕವಾಗಿ ನಾನು 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇನೆ. ಸಂತ್ರಸ್ತ ಯುವತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಯುವತಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನು ಕೂಡ ಆರೋಗ್ಯ ಸಚಿವರು ನೀಡಿದ್ದಾರೆ. 21ನೇ ಶತಮಾನದ ನಾಗರಿಕ ಸಮಾಜದಲ್ಲಿ ಈ ರೀತಿಯ ಹೃದಯ ಕಲಕುವಂತಹ ಘಟನೆ ನಡೆದಿರುವುದು ತಲೆ ತಗ್ಗಿಸುವ ವಿಚಾರ. ಇದು ರಾಕ್ಷಸಿ ಮನೋಭಾವ, ಯುವತಿಗೆ ಬಿಎಂಸಿಯಿಂದ ಚರ್ಮ ಕಸಿ ಮಾಡಲು ಹೇಳಿದ್ದೇವೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಆರೋಪಿಯನ್ನು ಶೀಘ್ರವೇ ಬಂಧಿಸಿ ಮುಖ್ಯಮಂತ್ರಿಗಳು ಮತ್ತು ಕಾನೂನು ಸಚಿವರ ಜೊತೆ ಚರ್ಚಿಸಿ ವಿಶೇಷವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಮಾಡಿ ತ್ವರಿತವಾಗಿ ಆರೋಪಿಗೆ ಶಿಕ್ಷೆಯಾಗುವಂತೆ ಒತ್ತಾಯಿಸುತ್ತೇನೆ, ಇಂತಹ ಕ್ರೌರ್ಯಕ್ಕೆ ತಕ್ಕ ಶಾಸ್ತಿಯಾಗಿ ಸಮಾಜಕ್ಕೆ, ಜನರಿಗೆ ಇದೊಂದು ಪಾಠವಾಗಬೇಕು ಎಂದರು.
ಸೈಂಟ್ ಜಾನ್ಸ್ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಪಡೆಯುತ್ತಿರುವ ಯುವತಿ ಬಳಿ ಕರೆದುಕೊಂಡು ಹೋಗಿದ್ದು ಆಕೆಯ ಬಳಿ ಮಾತನಾಡಿ ಧೈರ್ಯ ತುಂಬಿದ್ದೇನೆ. ಸರ್ಕಾರ ಯುವತಿ ಕುಟುಂಬ ಜೊತೆಗಿದೆ. ಮಾನಸಿಕವಾಗಿ ಧೈರ್ಯವಾಗಿರಬೇಕು ಎಂದು ಹೇಳಿದ್ದೇನೆ ಎಂದರು.
ಆಸಿಡ್ ದಾಳಿಗೊಳಗಾದಾಗ ಏನು ಮಾಡಬೇಕು?: ಆಸಿಡ್ ದಾಳಿಗೊಳಗಾದ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಜನರಿದ್ದರೆ ತಕ್ಷಣವೇ ತಣ್ಣೀರು ಹಾಕಬೇಕು, ಇದರಿಂದ ಸುಟ್ಟುಹೋಗುವ ಪ್ರಮಾಣ ಕಡಿಮೆಯಾಗುತ್ತದೆ. ಯುವತಿಗೆ ಶೇಕಡಾ 35ರಷ್ಟು ದೇಹದ ಭಾಗ ಸುಟ್ಟುಹೋಗಿದೆ. ಯುವತಿಯ ದೇಹಸ್ಥಿತಿ ಸ್ವಲ್ಪ ಕ್ಷಿಷ್ಟವಾಗಿದೆ. ವೈದ್ಯರು ಶಕ್ತಿಮೀರಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಡಾ ಸುಧಾಕರ್ ಹೇಳಿದರು.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…