ಬೆಂಗಳೂರು: ಅನಾರೋಗ್ಯದಿಂದ ನಗರದ ಮಲ್ಲೇಶ್ವರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಈ ವೇಳೆ ಕೆಲಕಾಲ ಸಿಎಂ ಅವರು ಡಿಕೆಶಿ ಜತೆ ಮಾತುಕತೆ ನಡೆಸಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಡಿ.ಕೆ.ಶಿವಕುಮಾರ್ ಅವರು ಕಳೆದ ಮೂರು ದಿನ ಕಲಬುರಗಿ ಪ್ರವಾಸ ಮಾಡಿದ್ದರು. ಅಲ್ಲಿನ ಆಹಾರದಿಂದಾಗಿ ಫುಡ್ ಪಾಯ್ಸನ್ ಆಗಿದ್ದರಿಂದ ಾರೋಗ್ಯ ಕೈಕೊಟ್ಟಿದೆ ಎಂದರು.