ಬೆಂಗಳೂರು: ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ವೈದ್ಯರ ಸಲಹೆ ಮೇರೆಗೆ ಇಂದು ವಿಶ್ರಾಂತಿ ಪಡೆಯಲಿದ್ದಾರೆ. ಹೀಗಾಗಿ ಇಂದು ಅವರು ‘ನಮ್ಮ ನೀರು ನಮ್ಮ ಹಕ್ಕು’ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ.ವೈದ್ಯರ ಸಲಹೆ ಮೇರೆಗೆ ಸಿದ್ದರಾಮಯ್ಯ ಇಂದೂ ವಿಶ್ರಾಂತಿ ಪಡೆಯಲಿದ್ದು, ನಾಳೆಯಿಂದ ಅವರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.
ರವಿವಾರ ಆರಂಭದಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನಂತರ ಜ್ವರ ಕಾಣಿಸಿಕೊಂಡ ಕಾರಣ ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ತೆರೆಳಿದ್ದರು.
ಇಂದು ಸಿದ್ದರಾಮಯ್ಯ ಅವರ ಜತೆ ಡಿ.ಕೆ.ಶಿವಕುಮಾರ್ ದೂರವಾಣಿ ಮೂಲಕ ಮಾತನಾಡಿ ಅರೋಗ್ಯ ವಿಚಾರಣೆ ನಡೆಸಿದರು.