ಬೆಂಗಳೂರು : ಉಕ್ರೇನ್ ನಿಂದ ಇಂದು ಕರ್ನಾಟಕದ 12 ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ವಿದ್ಯಾಭ್ಯಾಸಕ್ಕೆ ಉಕ್ರೇನ್ ಗೆ ತೆರಳಿದ್ದ ಕರ್ನಾಟಕ ವಿದ್ಯಾರ್ಥಿಗಳ ಪೈಕಿ 12 ಜನರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಉಕ್ರೇನ್-ರಷ್ಯಾ ದೇಶಗಳ ಯುದ್ಧದ ಹಿನ್ನೆಲೆಯಲ್ಲಿ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಗೆ ತೆರಳಿದ್ದ ಕನ್ನಡಿಗರು ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದರು.
ಕೇಂದ್ರ ಸರ್ಕಾರವು ಉಕ್ರೇನ್ ಸಿಲುಕಿರುವ ಭಾರತೀಯರನ್ನು ಏರ್ ಲಿಫ್ಟ್ ಮಾಡುತ್ತಿದ್ದು, ವಿದ್ಯಾರ್ಥಿಗಳು ನಿನ್ನೆ ರಾತ್ರಿ ಮುಂಬೈಗೆ ಆಗಮಿಸಿದ್ದರು. ಇಂದು ಮುಂಬೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿದ್ಯಾರ್ಥಿಗಳನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಸ್ವಾಗತಿಸಿ, ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದರು.