ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಈಗಾಗಲೇ ಕಳೆದ ವಾರದ ವೀಕೆಂಡ್ ಸಂದರ್ಭದಲ್ಲಿ ಮದ್ಯದಂಗಡಿಗಳನ್ನು ಸರ್ಕಾರ ಬಂದ್ ಮಾಡಿತ್ತು.
ಈ ವಾರವೂ ಕೂಡ ಬಾರ್ ಬಂದ್ ಮಾಡಲಾಗುತ್ತದೆ. ಇಂದು ರಾತ್ರಿ 10 ರಿಂದ ಸೋಮವಾರ ಬೆಳಿಗ್ಗೆಯವರೆಗೆ ಬಾರ್ ಬಂದ್ ಆಗಿರಲಿವೆ ಎಂದು ಅಬಕಾರಿ ಸಚಿವರು ತಿಳಿಸಿದ್ದಾರೆ. ಈ ಮೂಲಕ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿಯೂ ಎಣ್ಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ನೀಡಿದ್ದಾರೆ.
ಕಳೆದ ವಾರದ ವೀಕೆಂಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣದ ಮಾರ್ಗಸೂಚಿ ಕ್ರಮದ ಹಿನ್ನಲೆಯಲ್ಲಿ ಮದ್ಯದಂಗಡಿಗಳಲ್ಲಿ ಎಣ್ಣೆ ಮಾರಾಟವನ್ನು ನಿಷೇಧಿಸಿ ಆದೇಶಿಸಿತ್ತು. ಇದರಿಂದಾಗಿ ಸರ್ಕಾರಕ್ಕೆ ಕೋಟಿ ಕೋಟಿ ನಷ್ಟ ಉಂಟಾಗಲಿದೆ. ಬಾರ್ ಬಂದ್ ಮಾಡೋದು ಬೇಡ ಅಂತ ಅಬಕಾರಿ ಸಚಿವರು ಸಿಎಂಗೆ ಸಲಹೆ ಮಾಡಿದ್ದರೂ, ನೋ ಅಂತ ಬಂದ್ ನಿರ್ಧಾರವನ್ನು ಪ್ರಕಟಿಸಿದ್ದರು.
ಕನಿಷ್ಠ ಈ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಆದ್ರೂ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಲಿದೆ ಎನ್ನುವ ನಿರೀಕ್ಷೆಯಲ್ಲಿ ಮದ್ಯಪ್ರಿಯರಿದ್ದರು. ಆದ್ರೇ ಸ್ವತಹ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆಯವರೆಗೆ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಬಾರ್ ಗಳು ಬಂದ್ ಆಗಿರಲಿವೆ ಎಂದು ಹೇಳಿದ್ದಾರೆ. ಈ ಮೂಲಕ ವೀಕೆಂಡ್ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.