ಬೆಂಗಳೂರು: ಭಾರತ ಸರಕಾರದ ಕೇಂದ್ರ ಮಾಹಿತಿ ಆಯುಕ್ತ ಉದಯ್ ಮಹೂರ್ಕರ್ ಮತ್ತು ಚಿರಾಯು ಪಂಡಿತ್ ಬರೆದಿರುವ ‘ವೀರ್ ಸಾವರ್ಕರ್: ದಿ ಮ್ಯಾನ್ ಹೂ ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್’ ಪುಸ್ತಕ ಲೋಕಾರ್ಪಣೆ ಇಂದು ಬೆಂಗಳೂರಿನಲ್ಲಿ ಜರಗಲಿದೆ. ನಿಲುಮೆ ವೇದಿಕೆಯು ಸಂಜೆ 5 ಗಂಟೆಗೆ ಪುರಭವನದಲ್ಲಿ ಕಾರ್ಯಕ್ರಮ ಆಯೋಜಿಸಿದೆ.
ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಸ್ತಕ ಬಿಡುಗಡೆ ಮಾಡುತ್ತಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯ ಭಾಷಣಕಾರರಾಗಿದ್ದಾರೆ. ಕೃತಿಯ ಲೇಖಕ ಉದಯ್ ಮಹೂರ್ಕರ್, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಮುಖ್ಯ ಅತಿಥಿಗಳಾಗಿದ್ದಾರೆ. ಲಕ್ಷ್ಮೀ ರಾಜಕುಮಾರ್ ಕೃತಿ ಪರಿಚಯಿಸಲಿದ್ದಾರೆ.
ಪುಸ್ತಕದ ಹೆಸರೇ ಹೇಳುವಂತೆ ಸಾವರ್ಕರ್ ಇದ್ದಿದ್ದರೆ ಭಾರತವು ದೇಶ ವಿಭಜನೆಯನ್ನು ಎದುರಿಸುತ್ತಿರಲಿಲ್ಲ ಎಂಬುದನ್ನು ಕೃತಿಯಲ್ಲಿ ಪ್ರತಿಪಾದಿಸಲಾಗಿದೆ. ಸಾವರ್ಕರ್ ಅವರನ್ನು ತಪ್ಪಾಗಿ ಅರ್ಥೈಸಲಾಗಿದೆ. ಅದನ್ನು ತೊಡೆದು ಹಾಕುವ ಕೆಲಸವನ್ನು ಈ ಕೃತಿ ಮಾಡಲಿದೆ. ಸಾರ್ವಕರ್ ಅವರ ದೂರದೃಷ್ಟಿಯ ಬಗ್ಗೆ ಮತ್ತು ಅವರು ಇಂದು ಭಾರತ ಎದುರಿಸುತ್ತಿರುವ ರಾಷ್ಟ್ರೀಯ ಭದ್ರತಾ ಸಮಸ್ಯೆಗಳನ್ನು ಹೇಗೆ ಕಲ್ಪಿಸಿಕೊಂಡರು, ಸಾರ್ವಕರ್ ಅವರ ರಾಜತಾಂತ್ರಿಕತೆಯ ದೂರದೃಷ್ಟಿ ಇತ್ಯಾದಿಗಳ ಒಳ ಹೊಳಹನ್ನು ಈ ಕೃತಿ ಬಿಚ್ಚಿಡುತ್ತದೆ