ಬೆಂಗಳೂರು : ಇಂದು ಸಂಜೆ 6 ಗಂಟೆಗೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಇಂದು ಸಂಜೆ 6 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಕೆ ಮಾಡಲಿದ್ದು, ಬಳಿಕ ರೈಲಿನಲ್ಲಿ ಶಿವಮೊಗ್ಗಕ್ಕೆ ವಾಪಸ್ ತೆರಳಲಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ನನಗೆ ತಪ್ಪು ಮಾಡಿಲ್ಲ ಎನ್ನುವಂತ ನಂಬಿಕೆ ಇದೆ. ನನ್ನ ಮನೆದೇವರು ಚೌಡೇಶ್ವರಿಯವರು ನನ್ನ ಕಾಯುತ್ತಾಳೆ ಎಂಬುದಾಗಿ ನನಗೆ ನಂಬಿಕೆ ಇದೆ.
ನಾನು ನಾಳೆ ಸಂಜೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕೆ. ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದಾರೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ತನಿಖೆಯಿಂದ ನಾನು ನಿರ್ದೋಷಿ ಎಂಬುದಾಗಿ ಹೊರಬರಲಿದೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.