ಬೆಂಗಳೂರು : ಹಿಜಾಬ್ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಸದಸ್ಯ ಪೀಠವು ಮಹತ್ವದ ತೀರ್ಪು ನೀಡಿತ್ತು. ಹಿಜಾಬ್ ಧಾರ್ಮಿಕ ಅಚರಣೆ ಅಲ್ಲ ಎಂಬ ಹೈಕೋರ್ಟ್ ತೀರ್ಪಿನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆ ಅಮಿರ್-ಇ-ಷರಿಯತ್ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಈ ಬಗ್ಗೆ ಇಂದು ಮುಸ್ಲೀಂ ಧರ್ಮಗುರುಗಳ ಸಭೆ ನಡೆಸಲಾಗಿದ್ದು, ಈ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಅವರು, ಗುರುವಾರ ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.ಈ ಹಿನ್ನಲೆಯಲ್ಲಿ ಇಂದು ಇಡೀ ರಾಜ್ಯಾಧ್ಯಂತ ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ.ರಾಜ್ಯಾಧ್ಯಂತ ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ಅಲ್ಲದೇ ತರಗತಿ, ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ನಡೆದಿದ್ದಾರೆ. ಇದೇ ಸಂದರ್ಭದಲ್ಲಿ ಹಿಜಾಬ್ ಧರಿಸೋದಕ್ಕೆ ಅನುಮತಿ ಕೋರಿ ಇಂದು ಕರ್ನಾಟಕ ಬಂದ್ ಗೆ ಮುಸ್ಲೀಂ ಮುಖಂಡರಿಂದ ಕರೆ ನೀಡಲಾಗಿದೆ.
ವೈದ್ಯರು, ಕಾರ್ಮಿಕರು, ಸರ್ಕಾರಿ ಉದ್ಯೋಗಿಗಳು ಸೇರಿದಂತೆ ಸಮುದಾಯದ ಎಲ್ಲರೂ ಬಂದ್ ಪಾಲ್ಗೊಳ್ಳುವಂತೆ ಕೋರಿದೆ. ಸಮುದಾಯದ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ಮನವಿ ಮಾಡಿದೆ. ಆದರೆ ಇದು ಶಾಂತಿಯುತ ಪ್ರತಿಭಟನೆಯಾಗಿದ್ದು, ಬಲವಂತದ ಬಂದ್ ಮಾಡಬಾರದು ಎಂದು ಕೋರಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…