ಬೆಂಗಳೂರು: ಜನನ, ಮರಣ, ಆದಾಯ ಪ್ರಮಾಣ ಪತ್ರ ಹೀಗೆ ಅಗತ್ಯ ದಾಖಲೆಗಳನ್ನು ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆಯಬೇಕಾಗಿಲ್ಲ. ಅದು ಮನೆಬಾಗಿಲಿಗೆ ತಲುಪಿಸುವ ಯೋಜನೆ ರಾಜ್ಯ ಸರ್ಕಾರ ಜಾರಿಗೆ ತರಲಿದೆ.
ದೆಹಲಿ ಸರ್ಕಾರವು ಇದೇ ರೀತಿಯ ಯೋಜನೆ ಜಾರಿಗೆ ತಂದು ಇದರಲ್ಲಿ ಯಶಸ್ವಿಯಾಗಿದೆ. ಈಗ ರಾಜ್ಯ ಸರ್ಕಾರ ಕೂಡ ಇದನ್ನು ಜಾರಿಗೆ ತರಲು ಮುಂದಾಗಿದೆ.
ಜನನ ಮತ್ತು ಮರಣ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಹೀಗೆ ಸುಮಾರು ನೂರಕ್ಕೂ ಅಧಿಕ ಸೇವೆಗಳನ್ನು ಈ ಯೋಜನೆಯಡಿಯಲ್ಲಿ ನೀಡಲು ಸರ್ಕಾರ ಮುಂದಾಗಿದೆ.
ಪ್ರಾಯೋಗಿಕವಾಗಿ ಈ ಯೋಜನೆಯು ಈಗ ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ವ್ಯಾಪ್ತಿಯಲ್ಲಿ ಜಾರಿಗೆ ಬಂದಿದೆ. ಶೀಘ್ರದಲ್ಲೇ ಇದನ್ನು ರಾಜ್ಯವ್ಯಾಪಿ ಜಾರಿಗೆ ತರಲು ಚಿಂತನೆ ನಡೆದಿದೆ.