ಬೆಂಗಳೂರು: ಕಬ್ಬನ್ ಪಾರ್ಕ್ ಒಳಗೆ ಇನ್ನು ಮುಂದೆ ಸಾಕು ನಾಯಿ ಆಗಲಿ, ಬೀದ ನಾಯಿ ಆಗಲೀ ಪ್ರವೇಶ ಮಾಡುವಂತಿಲ್ಲ. ಕಬ್ಬನ್ ಉದ್ಯಾನವನದಲ್ಲಿ ಇನ್ಮುಂದೆ ನಾಯಿಗಳು ಕಾಣಿಸಿಕೊಂಡರೆ ಬಿಬಿಎಂಪಿ ಅಧಿಕಾರಿಗಳ ತಲೆದಂಡ ಖಚಿತ. ಇಂತಹ ಮಹತ್ವದ ಆದೇಶವನ್ನು ಹೈಕೋರ್ಟ್ ನೀಡಿದೆ.
‘ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆತಂದು ಮಲ, ಮೂತ್ರ ವಿಸರ್ಜನೆ ಮಾಡಿಸುವುದನ್ನು ತಡೆಯಬೇಕು. ಈ ವಿಷಯದಲ್ಲಿ ಬಿಬಿಎಂಪಿ ತಾನಾಗಿಯೇ ಕ್ರಮ ಜರುಗಿಸಬೇಕು. ಇಲ್ಲವಾದರೆ ನ್ಯಾಯಾಲಯವೇ ಈ ಸಂಗತಿಯನ್ನು ಪರಿಗಣನೆಗೆ ತೆಗೆದುಕೊಂಡು ನೋಟಿಸ್ ಜಾರಿ ಮಾಡಲು ಆದೇಶಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಮೌಖಿಕ ಎಚ್ಚರಿಕೆ ನೀಡಿದೆ.