ಬೆಂಗಳೂರು : ಸಂಜಯನಗರದಲ್ಲಿ ಇಸ್ರೋ ಕೇಂದ್ರ ಕಛೇರಿ ಎದುರು ಎನ್.ಎಸ್.ಯು.ಐ.ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಇಸ್ರೋ ಕೇಂದ್ರ ಗುಜರಾತ್ ರಾಜ್ಯಕ್ಕೆ ವರ್ಗಾಯಿಸುವ ವಿರುದ್ದ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಕೆ.ಪಿ.ಸಿ.ಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನೇತೃತ್ವ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಮಾತನಾಡಿ ನಮ್ಮ ಹಿರಿಯ ಕಟ್ಟಿ ಬೆಳಸಿದ ಹಲವಾರು ಸಂಸ್ಥೆಗಳನ್ನು ಬಿ.ಜೆ.ಪಿ.ಪಕ್ಷದ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿದೆ .ಬೆಂಗಳೂರಿನ ಹವಮಾನ ,ಉತ್ತಮ ಪರಿಸರದ ಕಾರಣದಿಂದ ಇಸ್ರೋ ಸಂಸ್ಥೆ ಸ್ಥಾಪಿಸಲಾಯಿತು .ಅದರೆ ಇಂದು ಗುಜರಾತ್ ರಾಜ್ಯಕ್ಕೆ ಇಸ್ರೋ ಸಂಸ್ಥೆ ವರ್ಗಾಯಿಸುವ ಹುನ್ನಾರ ನಡೆಯುತ್ತಿದೆ .ರಾಜ್ಯ 25ಬಿ.ಜೆ.ಪಿ.ಲೋಕ ಸಭಾ ಸದಸ್ಯರು 12ರಾಜ್ಯ ಸಭಾ ಸದಸ್ಯರು ಪ್ರಧಾನಿರವರ ಬಳಿ ನಿಯೋಗ ತೆರಳಿ ಇಸ್ರೋ ಸಂಸ್ಥೆ ಇಲ್ಲಿಯೆ ಉಳಿಯುವಂತೆ ಮಾಡಬೇಕು .
ಪ್ರಧಾನಿ ನರೇಂದ್ರಮೋದಿ ರವರಿಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ಇಸ್ರೋ ಸಂಸ್ಥೆ ಇಲ್ಲಿ ಉಳಿಯುವಂತೆ ಮನವಿ ಮಾಡಲಾಗುವುದು .ವರ್ಗಾವಣೆಯಾದರೆ ಉಗ್ರ ಹೋರಾಟ ಮಾಡುವುದಾಗಿ ಎಂದು ಹೇಳಿದರು.
ಮಾಜಿ ಸಚಿವ ,ಶಾಸಕರಾದ ಕೃಷ್ಣಭೈರೇಗೌಡ ,ಎನ್.ಎಸ್.ಯು.ಐ.ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಬೆಂಗಳೂರುನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಜಯಸಿಂಹ ರವರು ಮತ್ತು ವಿದ್ಯಾರ್ಥಿ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
PHOTO/ REPORT CREDIT : G.Mohan, Photojournalist, Bengaluru