ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ ಹೊಸ ರೂಪ ನೀಡಲಾಗುತ್ತದೆ ಹೊರ ರಾಜ್ಯಗಳಿಂದ ನಕಲಿ ಮದ್ಯ ತಂದು ಮಾಡೋದಕ್ಕೂ ಕ್ರಮ ಕೈಗೊಂಡಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಬಜೆಟ್ ಗೂ ಮುನ್ನಾ ಇಲಾಖಾವಾರು ಸಭೆ ನಡೆಸಿದ ಬಳಿಕ ಮಾತನಾಡಿದಂತ ಅವರು, ರಾಜ್ಯದಲ್ಲಿ ನಕಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ.
ರಾಜ್ಯದಲ್ಲಿನ ಸಿಎಲ್ 7, ಸಿಎಲ್ 9 ಗಳ ವಿಚಾರವಾಗಿ ಅನೇಕ ದೂರುಗಳು ಬಂದಿದೆ. ಇವುಗಳನ್ನು ಸರಿ ಪಡಿಸೋ ಕೆಲಸ ಮಾಡಲಾಗುತ್ತದೆ. ಅಬಕಾರಿ ಇಲಾಖೆಯಲ್ಲಿನ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತದೆ. 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ ಹೊಸ ಸ್ವರೂಪ ನೀಡಲಾಗುವುದು ಎಂದು ಹೇಳಿದ್ದಾರೆ.