ಈ ವರ್ಷ ಎಲ್ಲಾ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದೇ ಪಾಸ್ ಆಗಬೇಕು. ಕಳೆದ ವರ್ಷದಂತೆ ಕೊರೋನಾ ಪಾಸ್ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
2021ರಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಕೋವಿಡ್ ಸಮಸ್ಯೆ ಎದುರಿಸುತ್ತಿದ್ದರು. ಹಾಗಾಗಿ ಕಳೆದ ವರ್ಷ ಕೊರೋನಾ ಪಾಸ್ ನೀಡಲಾಯಿತು. ಆದರೆ ಈ ಬಾರಿ ಆ ವ್ಯವಸ್ಥೆ ಇರುವುದಿಲ್ಲ. ಮಕ್ಕಳು ಪರೀಕ್ಷೆ ಬರೆದೇ ಪಾಸ್ ಆಗಬೇಕು. ಇಲ್ಲವಾದರೆ ಮಕ್ಕಳು ಓದುವ ಅಭ್ಯಾಸವನ್ನೇ ಮರೆತು ಬಿಡುತ್ತಾರೆ ಎಂದರು.
ಈಗಾಗಲೇ ಮಕ್ಕಳಿಗೆ ಸಹಾಯವಾಗಲೆಂದು ಶೇ.30ರಷ್ಟು ಪಠ್ಯಕ್ರಮ ಕಡಿಮೆ ಮಾಡಲಾಗಿದೆ. ಹಾಗಾಗಿ ಮಾರ್ಚ್- ಏಪ್ರಿಲ್ ವೇಳೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಎಲ್ಲಾ ಕೋವಿಡ್ ನಿಯಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುತ್ತದೆ ಎಂದರು.