ರಾಜ್ಯದ ಹಲವು ವಿದ್ಯಾರ್ಥಿಗಳು ತಾಯ್ನಾಡಿಗೆ ಬಂದಿದ್ದಾರೆ. ವಿಮಾನ ಮೂಲಕ ಕರ್ನಾಟಕಕ್ಕೆ ಬಂದಿಳಿದ ವಿದ್ಯಾರ್ಥಿಗಳ ಪರಿಸ್ಥಿತಿಯನ್ನು ಪರಿಗಣಿಸಿ ವಿಮಾನ ನಿಲ್ದಾಣದಿಂದ ಅವರ ಊರುಗಳಿಗೆ ತಲುಪಿಸುವ ಮೂಲಕ ಉಚಿತ ಪ್ರಯಾಣವನ್ನು ನೀಡಲು ಕೆಎಸ್ಆರ್ಟಿಸಿ ಬಸ್ನಲ್ಲಿ ನಿರ್ಧರಿಸಿದೆ.
ಕರ್ನಾಟಕ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಮತ್ತು ರಸ್ತೆ ಸಾರಿಗೆ ಸಂಸ್ಥೆಯ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಪ್ರಯಾಣವನ್ನು ಅನುವು ಮಾಡಿಕೊಡಬೇಕು ಅಂತ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಶಿವಯೋಗಿ ಸಿ.ಕಳಸದ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಉಕ್ರೇನ್ನಿಂದ ಹಿಂದಿರುಗಿದ ನಮ್ಮ ಜನರು, ವಿಶೇಷವಾಗಿ ವಿದ್ಯಾರ್ಥಿ ಸಮುದಾಯದ ಪರಿಸ್ಥಿತಿಯನ್ನು ಪರಿಗಣಿಸಿ, ಕರ್ನಾಟಕದ ಹತ್ತಿರದ ವಿಮಾನ ನಿಲ್ದಾಣದಿಂದ ರಾಜ್ಯದೊಳಗಿನ ಅವರ ಸ್ಥಳೀಯ ಸ್ಥಳಗಳಿಗೆ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣವನ್ನು ನೀಡಲು ನಿರ್ಧರಿಸಲಾಗಿದೆ.
(1/2)
— KSRTC (@KSRTC_Journeys) February 28, 2022