ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಷ್ಯಾದ ಆಕ್ರಮಣ ಹಾಗೂ ತಾವು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಗುರುವಾರ ವಿವರಿಸಿದ್ದು, ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿಗಳು ಈ ವೇಳೆ ಮುಖ್ಯಮಂತ್ರಿಗಳು ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಸುರಕ್ಷಿತವಾಗಿ ರಾಜ್ಯಕ್ಕೆ ತರೆತರಲು ಸರ್ವ ಪ್ರಯತ್ನ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಗುರುವಾರ 104 ಸೇರಿದಂತೆ ಉಕ್ರೇನ್ನಿಂದ 190 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಇನ್ನೂ 400 ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ವೇಳೆ ತಮ್ಮ ಪರಿಸ್ಥಿತಿಯನ್ನು ವಿವರಿಸಿದ ವಿದ್ಯಾರ್ಥಿಗಳು ಅಂದಾಜು 200ಮಂದಿ ಕನ್ನಡಿಗ ವಿದ್ಯಾರ್ಥಿಗಳು ಖಾರ್ಕೀವ್ ನಲ್ಲಿದ್ದೇವೆ ಶೀಘ್ರ ರಕ್ಷಣೆಯ ಅಗತ್ಯವಿದೆ ಎಂದು ಮನವಿ ಮಾಡಿಕೊಂಡರು.
ಬೆಂಗಳೂರು ಮೂಲದ ಗಗನ್ ಎಂಬುವವರು ಮಾತನಾಡಿ, ಒಂದಿಷ್ಟು ಮಂದಿ ತಂಡಗಳನ್ನು ಮಾಡಿಕೊಂಡು ಖಾರ್ಕೀವ್ ನಿಂದ 30 ಕಿ.ಮೀ ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಸಾಗಿದ್ದೇವೆ. ಸದ್ಯಕ್ಕೆ ನಾವು ಸುರಕ್ಷಿತವಾಗಿ ಇದ್ದೇವೆಂದು ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ನಿಮ್ಮ ಸುರಕ್ಷಿತ ವಾಪಸಾತಿಗೆ ಎಲ್ಲಾ ಸಹಕಾರವನ್ನು ನೀಡುತ್ತೇವೆ. ಇದಕ್ಕಾಗಿ ಸಂಘಟಿತ ಪ್ರಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.
ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಅನ್ನು ಜಿಲ್ಲೆಗಳಿಗೆ ರವಾನಿಸಲಾಗಿದೆ ಮತ್ತು ವಿದ್ಯಾರ್ಥಿಗಳ ಪೋಷಕರ ಸಂಪರ್ಕಿಸಲು ಸ್ಥಳೀಯ ಆಡಳಿತವು ವಿಶೇಷ ತಂಡಗಳನ್ನು ರಚಿಸಿದೆ, ವಿದ್ಯಾರ್ಥಿಗಳನ್ನು ಮರಳಿ ಕರೆತರಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಈ ತಂಡ ಅವರಿಗೆ ವಿವರಿಸಲಿದೆ. ಅಧಿಕಾರಿಗಳು ಗುರುವಾರದವರೆಗೆ 335 ಕುಟುಂಬಗಳನ್ನು ಭೇಟಿ ಮಾಡಿದ್ದಾರೆ ಮತ್ತು 425 ಕುಟುಂಬಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆಂದು ಕೆಎಸ್ಡಿಎಂಎಯ ನೋಡಲ್ ಅಧಿಕಾರಿ ಮತ್ತು ಆಯುಕ್ತ ಮನೋಜ್ ರಾಜನ್ ಅವರು ಹೇಳಿದ್ದಾರೆ.