News Karnataka Kannada
Tuesday, May 07 2024
ಬೆಂಗಳೂರು ನಗರ

ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆ ಮಹತ್ವದ ಸಭೆ ನಡೆಸಿದ ಡಾ.ಸುಧಾಕರ್

Dr. Sudhakar
Photo Credit :

ವಿಧಾನಸೌಧ : ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರೌ ಸೋಮವಾರ ಮಹತ್ವದ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಸಚಿವ ಸುಧಾಕರ್‌, ಉಕ್ರೇನ್ ನಿಂದ ವಾಪಸ್ ಬಂದ ಸಾಕಷ್ಟು ಸಾಕಷ್ಟು ವಿದ್ಯಾರ್ಥಿಗಳು ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. ಸಿಎಂ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಮುಂದುವರೆಯಬೇಕು, ಅದಕ್ಕೆ ನಮ್ಮ ಮೊದಲ ಆದ್ಯತೆ ಎಂದರು.

ವಿದ್ಯಾರ್ಥಿಗಳು ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದ್ದು, ಕರ್ನಾಟಕದಲ್ಲಿ ಸದ್ಯಕ್ಕೆ ಇರುವ ಮೆಡಿಕಲ್ ಕಾಲೇಜು ಶಿಕ್ಷಣ ಮುಂದುವರೆಯಲಿದೆ. ಕೇಂದ್ರ ಸರಕಾರದ ಜತೆಗೆ ಚರ್ಚೆ ಮಾಡುತ್ತೇವೆ. ಈಗಾಗಲೇ ಪ್ರಧಾನಿ ಕೂಡ ಇದೇ ವಿಚಾರಕ್ಕೆ ಸಭೆ ನಡೆಸಿದ್ದಾರೆ. ಇದಕ್ಕೆ ಅಂತಹ ಒಂದು ಸಮಿತಿ ರಚನೆ ಆಗಲಿದೆ. ಉಕ್ರೇನ್ ನಿಂದ ವಾಪಸ್ ಕರೆದುಕೊಂಡು ಬರುವ ವಿಚಾರದಲ್ಲಿ ಕೇಂದ್ರ ಸರ್ಕಾರದ ನೆರವು ನೀಡಿದೆ ಎಂದರು.

ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಸಹ ಮುಖ್ಯ, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಭವಿಷ್ಯದ ರೂಪಿಸುವ ಕೆಲಸ ಆಗಲಿದೆ. ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಆಗಲಿದೆ. ನಾಲ್ಕು ಜನ ಡಿನ್ ಗಳು ಸಹ ಸಮಿತಿಯಲ್ಲಿ ಇರಲಿದ್ದಾರೆ. ವಿದ್ಯಾರ್ಥಿಗಳು ಈಗ ಇಟ್ಟಿರುವ ಮುಖ್ಯ ಬೇಡಿಕೆ ಅಂದರೆ ತಕ್ಷಣ ಕಲಿಕೆ ಮುಂದುವರೆಸುವ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ. ಯಾವುದೇ ಕಾರಣಕ್ಕೂ ಈಗ ವಿದ್ಯಾಭ್ಯಾಸ ನಿಲ್ಲಬಾರದು ಅಂತ ಮನವಿ ಮಾಡಿಕೊಂಡಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು