ಬೆಂಗಳೂರು: ರಾಜ್ಯ ಬಂಧಿಖಾನೆ ಇಲಾಖೆಯು ಉತ್ತಮ ನಡವಳಿಕೆ ತೋರಿಸಿದ ಸುಮಾರು 141 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿದೆ.
ರಾಜ್ಯಪಾಲರಿಂದ ಅನುಮತಿ ಪಡೆದುಕೊಂಡ ಬಳಿಕ ಈ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೈದಿಗಳಿಗೆ ಉತ್ತಮ ನಡವಳಿಕೆ ಪ್ರಮಾಣಪತ್ರ ವಿತರಿಸಿದರು.
ಪರಪ್ಪನ ಅಗ್ರಹಾರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವಂತಹ ಸಮುದಾಯ ಬಾನುಲಿ ಕೇಂದ್ರವನ್ನು ಕೂಡ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಬಂಧಿಖಾನೆ ವಿಭಾಗವು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದಾಯ ಬಾನುಲಿ ಕೇಂದ್ರವನ್ನು ಉದ್ಘಾಟಿಸಿದೆ.