News Karnataka Kannada
Thursday, May 02 2024
ಬೆಂಗಳೂರು ನಗರ

ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ

Vaccine 17072021
Photo Credit :

ಬೆಂಗಳೂರು,ಡಿ.1 : ವಿಶ್ವ ಕಂಟಕವಾಗಿರುವ ಓಮಿಕ್ರಾನ್ ಸೋಂಕು ನಗರಕ್ಕೆ ಕಾಲಿಡದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಬಿಬಿಎಂಪಿ ಇದುವರೆಗೂ ಕೊರೊನಾ ಲಸಿಕೆ ಪಡೆಯದವರನ್ನು ಪತ್ತೆ ಹಚ್ಚಿ ವ್ಯಾಕ್ಸಿನ್ ಹಾಕಿಸುವತ್ತ ಚಿತ್ತ ಹರಿಸಿದೆ.

ನಗರದಲ್ಲಿ ಇದುವರೆಗೂ 22 ಲಕ್ಷ ಮಂದಿ ಮೊದಲ ಡೋಸ್ ಹಾಗೂ 10 ಲಕ್ಷ ಮಂದಿ ಎರಡನೆ ಡೋಸ್ ಪಡೆಯದೆ ತಲೆಮರೆಸಿಕೊಂಡಿದ್ದಾರೆ ಅಂತವರನ್ನು ಪತ್ತೆ ಹಚ್ಚಿ ಲಸಿಕೆ ಹಾಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಬಾಲಸುಂದರಮ್ ತಿಳಿಸಿದ್ದಾರೆ.

ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡರೆ ರೂಪಾಂತರಿ ಸೋಂಕಿನಿಂದ ಬಚಾವಾಗುವುದರ ಜತೆಗೆ ಸೋಂಕು ಕಾಣಿಸಿಕೊಂಡರೂ ಅದು ಮಾರಣಾಂತಿಕವಾಗದಂತೆ ನೋಡಿಕೊಳ್ಳಲು ಸಹಕಾರಿಯಾಗಲಿದೆ ಹೀಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡರು.

ಕೆಲವರು ಲಸಿಕೆ ಹಾಕಿಸಿಕೊಳ್ಳಲು ಇನ್ನು ಮನಸ್ಸು ಮಾಡಿಲ್ಲ. ಅಂತವರಿಗೆ ಪಾಠ ಕಲಿಸುವ ಉದ್ದೇಶದಿಂದ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಎಂಬ ನೀತಿ ಜಾರಿಗೆ ತರಲು ನಾವು ತೀರ್ಮಾನಿಸಿದ್ದೇವೆ ಎಂದರು.

ಈ ಕುರಿತಂತೆ ನಾವು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರ ಮೂಲಕ ಆರೋಗ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದೇವೆ. ನಮ್ಮ ಮನವಿಗೆ ಗ್ರೀನ್ ಸಿಗ್ನಲ್ ಸಿಕ್ಕ ಕೂಡಲೆ ನಾವು ಎರಡು ಡೋಸ್ ಲಸಿಕೆ ಪಡೆದವರು ಮಾತ್ರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ಎಂಬ ನೀತಿ ಜಾರಿಗೆ ತರುತ್ತೇವೆ ಎಂದು ಅವರು ಹೇಳಿದರು.

ಓಮಿಕ್ರಾನ್ ಸೋಂಕು ತೀವ್ರಗೊಂಡ ನಂತರ ಇದುವರೆಗೂ ಲಸಿಕೆ ಪಡೆಯದವರು ಲಸಿಕಾ ಕೇಂದ್ರಗಳತ್ತ ದೌಡಾಯಿಸಿ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ. ಆದರೂ ಬಿಬಿಎಂಪಿ ಅಧಿಕಾರಿಗಳು ಎಲ್ಲಾ 198 ವಾರ್ಡ್‍ಗಳ ಮನೆ ಮನೆಗಳಿಗೂ ತೆರಳಿ ಲಸಿಕೆ ಹಾಕಿಸಿಕೊಳ್ಳದವರನ್ನು ಪತ್ತೆ ಹಚ್ಚಿ ಲಸಿಕೆ ಹಾಕಿಸುವತ್ತ ಗಮನ ಹರಿಸಿದೆ ಎಂದರು.

ಒಂದು ವಾರ್ಡ್‍ನಲ್ಲಿ 20 ರಿಂದ 22 ಬ್ಲಾಕ್‍ಗಳಿದ್ದು ಅಲ್ಲಿನ ಅಧಿಕಾರಿಗಳು ಮತದಾರರ ಗುರುತಿನ ಚೀಟಿ ವಿವರ ಪಡೆದು ಮ್ಯಾಪ್ ಆಧಾರದ ಮೇಲೆ ಎಲ್ಲರ ಮನೆಗಳಿಗೂ ಭೇಟ ನೀಡಲಿದ್ದಾರೆ.

ಮನೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಮನೆಯಲ್ಲಿ ಎಷ್ಟು ಮಂದಿ ಇದ್ದಾರೆ. ಎಷ್ಟು ಮಂದಿ ಎರಡು ಡೋಸ್ ಪಡೆದುಕೊಂಡಿದ್ದಾರೆ. ಎಷ್ಟು ಮಂದಿ ಕೇವಲ ಮೊದಲ ಡೋಸ್ ಪಡೆದಿದ್ದಾರೆ. ಯಾರು ಇದುವರೆಗೂ ಲಸಿಕೆ ಪಡೆದಿಲ್ಲ ಎನ್ನುವ ವಿವರ ಪಡೆದು ಅವರ ಮನವೊಲಿಸಿ ಅವರನ್ನು ವ್ಯಾಕ್ಸಿನ್ ಕೇಂದ್ರಗಳಿಗೆ ಕರೆತಂದು ಲಸಿಕೆ ಹಾಕಿಸಲಾಗುವುದು ಎಂದು ಬಾಲಸುಂದರ್ ವಿವರಿಸಿದರು.

ಇದುವರೆಗೂ ಮೊದಲ ಲಸಿಕೆ ಪಡೆಯದ 22 ಲಕ್ಷ ಹಾಗೂ ಎರಡನೆ ಡೋಸ್ ಪಡೆಯದ 10 ಲಕ್ಷ ಮಂದಿಯ ವಿವರ ನಮ್ಮ ಬಳಿ ಇದ್ದು ಎಲ್ಲರಿಗೂ ಮೊಬೈಲ್ ಕರೆ ಮಾಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳುವ ಮೂಲಕ ನಗರದಲ್ಲಿ ಎಲ್ಲರಿಗೂ ಕೊರೊನಾ ಲಸಿಕೆ ಹಾಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಣೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು